ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

Published : Nov 18, 2023, 01:04 PM ISTUpdated : Nov 18, 2023, 01:05 PM IST

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

ಕರಾವಳಿಯ ಮೈನವರಿಳಿಸೋ ಸ್ಪರ್ಧೆ ಅಂದ್ರೆ ಅದು ಕಂಬಳ(Kambala).ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಆಯೋಜನೆಗೊಳ್ತಿದೆ. ಈಗಾಗಲೇ ಕೆರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷವೆಂದರೆ ಬೆಂಗಳೂರು(Bengaluru) ಕಂಬಳದ ಜೋಡುಕೆರೆಗಳಿಗೆ ಕರುನಾಡ ಮನೆಮಗ ಪುನೀತ್(Puneeth Rajkumar) ಮತ್ತು ರಾಜಕುಮಾರ್(Rajkumar) ಹೆಸರನ್ನ ಕಂಬಳಕ್ಕೆ ಇಡಲು ನಿರ್ಧರಿಸಿದ್ದಾರೆ. ಕಂಬಳ ಆಯೋಜಕರ ನಿರ್ಧಾರ ರಾಜ್‌ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಹರ್ಷಕ್ಕೂ ಕಾರಣವಾಗಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುತ್ತಿರುವ ಜೋಡುಕೆರೆ ಕಂಬಳಕ್ಕೆ ಇಷ್ಟು ದಿನ ಹೆಸರು ಫಿಕ್ಸ್ ಆಗಿರಲಿಲ್ಲ. ಕರಾವಳಿಯಲ್ಲಿ ನಡೆಯುವ ಕಂಬಳ ಕೆರೆಗಳಿಗೆ ಸೂರ್ಯ-ಚಂದ್ರ, ಕೋಟಿ-ಚೆನ್ನಯ, ರಾಮ-ಲಕ್ಷ್ಮಣ, ಕಾಂತಬಾರೆ-ಬೂದಬಾರೆ ಎಂಬಿತ್ಯಾದಿ ಹೆಸರುಗಳಿವೆ. ಆದ್ರೆ, ಬೆಂಗಳೂರಲ್ಲಿ ನಡೆಯುತ್ತಿರೋ ಮೊದಲ ಕಂಬಳಕ್ಕೆ ಯಾವ ಹೆಸರಿಡಬ್ಕೇಕು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸದ್ಯ ಬೆಂಗಳೂರು ಕಂಬಳಕ್ಕೆ ಕನ್ನಡದ ಕಣ್ಮಣಿ ರಾಜ್‌ಕುಮಾರ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿ ಪುನೀತ್-ರಾಜ್ ಕಂಬಳ ಎಂದು ನಾಮಕರಣ ಮಾಡಲಾಗಿದೆ.ಈಗಾಗಲೇ ಬೆಂಗಳೂರು ಕಂಬಳದ ಸಿದ್ಧತೆ ಪೂರ್ಣಗೊಂಡಿದ್ದು ಕಂಬಳ ಕೆರೆಗಾಗಿ ಮತ್ತು ಇತರ ಬಳಕೆಗಾಗಿ ಪ್ಯಾಲೇಸ್ ಗ್ರೌಂಡ್‌ನಲ್ಲಿ 2 ಬೋರ್‌ವೆಲ್ ಕೊರೆಸಲಾಗಿದೆ. 2 ಬೋರ್‌ವೆಲ್‌ನಲ್ಲೂ ಯಥೇಚ್ಛವಾಗಿ ನೀರು ದೊರಕಿದ್ದು ಕಂಬಳಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಸರ್ಕಸ್ ನಡೆಯುತ್ತಿದ್ದ ಈ ಗ್ರೌಂಡ್ ಕ್ರಮೇಣ ಕಸದ ರಾಶಿ, ಮುಳ್ಳುಗಂಟೆಗಳಿಂದ ಹಾಳಾಗಿತ್ತು. ಈಗ ಕಂಬಳಕ್ಕಾಗಿ ಗ್ರೌಂಡ್ ಸ್ವಚ್ಚಗೊಳಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more