ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

Published : Nov 18, 2023, 01:04 PM ISTUpdated : Nov 18, 2023, 01:05 PM IST

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

ಕರಾವಳಿಯ ಮೈನವರಿಳಿಸೋ ಸ್ಪರ್ಧೆ ಅಂದ್ರೆ ಅದು ಕಂಬಳ(Kambala).ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಆಯೋಜನೆಗೊಳ್ತಿದೆ. ಈಗಾಗಲೇ ಕೆರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷವೆಂದರೆ ಬೆಂಗಳೂರು(Bengaluru) ಕಂಬಳದ ಜೋಡುಕೆರೆಗಳಿಗೆ ಕರುನಾಡ ಮನೆಮಗ ಪುನೀತ್(Puneeth Rajkumar) ಮತ್ತು ರಾಜಕುಮಾರ್(Rajkumar) ಹೆಸರನ್ನ ಕಂಬಳಕ್ಕೆ ಇಡಲು ನಿರ್ಧರಿಸಿದ್ದಾರೆ. ಕಂಬಳ ಆಯೋಜಕರ ನಿರ್ಧಾರ ರಾಜ್‌ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಹರ್ಷಕ್ಕೂ ಕಾರಣವಾಗಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುತ್ತಿರುವ ಜೋಡುಕೆರೆ ಕಂಬಳಕ್ಕೆ ಇಷ್ಟು ದಿನ ಹೆಸರು ಫಿಕ್ಸ್ ಆಗಿರಲಿಲ್ಲ. ಕರಾವಳಿಯಲ್ಲಿ ನಡೆಯುವ ಕಂಬಳ ಕೆರೆಗಳಿಗೆ ಸೂರ್ಯ-ಚಂದ್ರ, ಕೋಟಿ-ಚೆನ್ನಯ, ರಾಮ-ಲಕ್ಷ್ಮಣ, ಕಾಂತಬಾರೆ-ಬೂದಬಾರೆ ಎಂಬಿತ್ಯಾದಿ ಹೆಸರುಗಳಿವೆ. ಆದ್ರೆ, ಬೆಂಗಳೂರಲ್ಲಿ ನಡೆಯುತ್ತಿರೋ ಮೊದಲ ಕಂಬಳಕ್ಕೆ ಯಾವ ಹೆಸರಿಡಬ್ಕೇಕು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸದ್ಯ ಬೆಂಗಳೂರು ಕಂಬಳಕ್ಕೆ ಕನ್ನಡದ ಕಣ್ಮಣಿ ರಾಜ್‌ಕುಮಾರ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿ ಪುನೀತ್-ರಾಜ್ ಕಂಬಳ ಎಂದು ನಾಮಕರಣ ಮಾಡಲಾಗಿದೆ.ಈಗಾಗಲೇ ಬೆಂಗಳೂರು ಕಂಬಳದ ಸಿದ್ಧತೆ ಪೂರ್ಣಗೊಂಡಿದ್ದು ಕಂಬಳ ಕೆರೆಗಾಗಿ ಮತ್ತು ಇತರ ಬಳಕೆಗಾಗಿ ಪ್ಯಾಲೇಸ್ ಗ್ರೌಂಡ್‌ನಲ್ಲಿ 2 ಬೋರ್‌ವೆಲ್ ಕೊರೆಸಲಾಗಿದೆ. 2 ಬೋರ್‌ವೆಲ್‌ನಲ್ಲೂ ಯಥೇಚ್ಛವಾಗಿ ನೀರು ದೊರಕಿದ್ದು ಕಂಬಳಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಸರ್ಕಸ್ ನಡೆಯುತ್ತಿದ್ದ ಈ ಗ್ರೌಂಡ್ ಕ್ರಮೇಣ ಕಸದ ರಾಶಿ, ಮುಳ್ಳುಗಂಟೆಗಳಿಂದ ಹಾಳಾಗಿತ್ತು. ಈಗ ಕಂಬಳಕ್ಕಾಗಿ ಗ್ರೌಂಡ್ ಸ್ವಚ್ಚಗೊಳಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more