ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

Published : Nov 18, 2023, 01:04 PM ISTUpdated : Nov 18, 2023, 01:05 PM IST

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

ಕರಾವಳಿಯ ಮೈನವರಿಳಿಸೋ ಸ್ಪರ್ಧೆ ಅಂದ್ರೆ ಅದು ಕಂಬಳ(Kambala).ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಆಯೋಜನೆಗೊಳ್ತಿದೆ. ಈಗಾಗಲೇ ಕೆರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷವೆಂದರೆ ಬೆಂಗಳೂರು(Bengaluru) ಕಂಬಳದ ಜೋಡುಕೆರೆಗಳಿಗೆ ಕರುನಾಡ ಮನೆಮಗ ಪುನೀತ್(Puneeth Rajkumar) ಮತ್ತು ರಾಜಕುಮಾರ್(Rajkumar) ಹೆಸರನ್ನ ಕಂಬಳಕ್ಕೆ ಇಡಲು ನಿರ್ಧರಿಸಿದ್ದಾರೆ. ಕಂಬಳ ಆಯೋಜಕರ ನಿರ್ಧಾರ ರಾಜ್‌ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಹರ್ಷಕ್ಕೂ ಕಾರಣವಾಗಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುತ್ತಿರುವ ಜೋಡುಕೆರೆ ಕಂಬಳಕ್ಕೆ ಇಷ್ಟು ದಿನ ಹೆಸರು ಫಿಕ್ಸ್ ಆಗಿರಲಿಲ್ಲ. ಕರಾವಳಿಯಲ್ಲಿ ನಡೆಯುವ ಕಂಬಳ ಕೆರೆಗಳಿಗೆ ಸೂರ್ಯ-ಚಂದ್ರ, ಕೋಟಿ-ಚೆನ್ನಯ, ರಾಮ-ಲಕ್ಷ್ಮಣ, ಕಾಂತಬಾರೆ-ಬೂದಬಾರೆ ಎಂಬಿತ್ಯಾದಿ ಹೆಸರುಗಳಿವೆ. ಆದ್ರೆ, ಬೆಂಗಳೂರಲ್ಲಿ ನಡೆಯುತ್ತಿರೋ ಮೊದಲ ಕಂಬಳಕ್ಕೆ ಯಾವ ಹೆಸರಿಡಬ್ಕೇಕು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸದ್ಯ ಬೆಂಗಳೂರು ಕಂಬಳಕ್ಕೆ ಕನ್ನಡದ ಕಣ್ಮಣಿ ರಾಜ್‌ಕುಮಾರ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿ ಪುನೀತ್-ರಾಜ್ ಕಂಬಳ ಎಂದು ನಾಮಕರಣ ಮಾಡಲಾಗಿದೆ.ಈಗಾಗಲೇ ಬೆಂಗಳೂರು ಕಂಬಳದ ಸಿದ್ಧತೆ ಪೂರ್ಣಗೊಂಡಿದ್ದು ಕಂಬಳ ಕೆರೆಗಾಗಿ ಮತ್ತು ಇತರ ಬಳಕೆಗಾಗಿ ಪ್ಯಾಲೇಸ್ ಗ್ರೌಂಡ್‌ನಲ್ಲಿ 2 ಬೋರ್‌ವೆಲ್ ಕೊರೆಸಲಾಗಿದೆ. 2 ಬೋರ್‌ವೆಲ್‌ನಲ್ಲೂ ಯಥೇಚ್ಛವಾಗಿ ನೀರು ದೊರಕಿದ್ದು ಕಂಬಳಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಸರ್ಕಸ್ ನಡೆಯುತ್ತಿದ್ದ ಈ ಗ್ರೌಂಡ್ ಕ್ರಮೇಣ ಕಸದ ರಾಶಿ, ಮುಳ್ಳುಗಂಟೆಗಳಿಂದ ಹಾಳಾಗಿತ್ತು. ಈಗ ಕಂಬಳಕ್ಕಾಗಿ ಗ್ರೌಂಡ್ ಸ್ವಚ್ಚಗೊಳಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more