ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

Published : Nov 18, 2023, 01:04 PM ISTUpdated : Nov 18, 2023, 01:05 PM IST

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

ಕರಾವಳಿಯ ಮೈನವರಿಳಿಸೋ ಸ್ಪರ್ಧೆ ಅಂದ್ರೆ ಅದು ಕಂಬಳ(Kambala).ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಆಯೋಜನೆಗೊಳ್ತಿದೆ. ಈಗಾಗಲೇ ಕೆರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷವೆಂದರೆ ಬೆಂಗಳೂರು(Bengaluru) ಕಂಬಳದ ಜೋಡುಕೆರೆಗಳಿಗೆ ಕರುನಾಡ ಮನೆಮಗ ಪುನೀತ್(Puneeth Rajkumar) ಮತ್ತು ರಾಜಕುಮಾರ್(Rajkumar) ಹೆಸರನ್ನ ಕಂಬಳಕ್ಕೆ ಇಡಲು ನಿರ್ಧರಿಸಿದ್ದಾರೆ. ಕಂಬಳ ಆಯೋಜಕರ ನಿರ್ಧಾರ ರಾಜ್‌ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಹರ್ಷಕ್ಕೂ ಕಾರಣವಾಗಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುತ್ತಿರುವ ಜೋಡುಕೆರೆ ಕಂಬಳಕ್ಕೆ ಇಷ್ಟು ದಿನ ಹೆಸರು ಫಿಕ್ಸ್ ಆಗಿರಲಿಲ್ಲ. ಕರಾವಳಿಯಲ್ಲಿ ನಡೆಯುವ ಕಂಬಳ ಕೆರೆಗಳಿಗೆ ಸೂರ್ಯ-ಚಂದ್ರ, ಕೋಟಿ-ಚೆನ್ನಯ, ರಾಮ-ಲಕ್ಷ್ಮಣ, ಕಾಂತಬಾರೆ-ಬೂದಬಾರೆ ಎಂಬಿತ್ಯಾದಿ ಹೆಸರುಗಳಿವೆ. ಆದ್ರೆ, ಬೆಂಗಳೂರಲ್ಲಿ ನಡೆಯುತ್ತಿರೋ ಮೊದಲ ಕಂಬಳಕ್ಕೆ ಯಾವ ಹೆಸರಿಡಬ್ಕೇಕು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸದ್ಯ ಬೆಂಗಳೂರು ಕಂಬಳಕ್ಕೆ ಕನ್ನಡದ ಕಣ್ಮಣಿ ರಾಜ್‌ಕುಮಾರ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿ ಪುನೀತ್-ರಾಜ್ ಕಂಬಳ ಎಂದು ನಾಮಕರಣ ಮಾಡಲಾಗಿದೆ.ಈಗಾಗಲೇ ಬೆಂಗಳೂರು ಕಂಬಳದ ಸಿದ್ಧತೆ ಪೂರ್ಣಗೊಂಡಿದ್ದು ಕಂಬಳ ಕೆರೆಗಾಗಿ ಮತ್ತು ಇತರ ಬಳಕೆಗಾಗಿ ಪ್ಯಾಲೇಸ್ ಗ್ರೌಂಡ್‌ನಲ್ಲಿ 2 ಬೋರ್‌ವೆಲ್ ಕೊರೆಸಲಾಗಿದೆ. 2 ಬೋರ್‌ವೆಲ್‌ನಲ್ಲೂ ಯಥೇಚ್ಛವಾಗಿ ನೀರು ದೊರಕಿದ್ದು ಕಂಬಳಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಸರ್ಕಸ್ ನಡೆಯುತ್ತಿದ್ದ ಈ ಗ್ರೌಂಡ್ ಕ್ರಮೇಣ ಕಸದ ರಾಶಿ, ಮುಳ್ಳುಗಂಟೆಗಳಿಂದ ಹಾಳಾಗಿತ್ತು. ಈಗ ಕಂಬಳಕ್ಕಾಗಿ ಗ್ರೌಂಡ್ ಸ್ವಚ್ಚಗೊಳಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more