ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

ರಾಜ್ಯ ರಾಜಧಾನಿಯಲ್ಲೂ ಕರಾವಳಿಯ ಕ್ರೀಡೆಯ ಕಂಪು..! ಪುನೀತ್-ರಾಜ್ ಹೆಸರಲ್ಲಿ ನಡೆಯುತ್ತೆ ಅದ್ಧೂರಿ ಕಂಬಳ..!

Published : Nov 18, 2023, 01:04 PM ISTUpdated : Nov 18, 2023, 01:05 PM IST

ಬೆಂಗಳೂರು ಕಂಬಳಕ್ಕೆ ಭರದ ಸಿದ್ಧತೆ ನಡೆಯುತ್ತಿವೆ. ಕಂಬಳದ ಜೋಡುಕೆರೆಗಳಿಗೆ ಹೆಸರು ಕೂಡ ಫೈನಲ್ ಆಗಿದೆ. ಕರುನಾಡ ರಾಜಕುಮಾರ ಪುನೀತ್‌ಗೆ ಗೌರವ ಸಲ್ಲಿಸೋ ನಿಟ್ಟಿನಲ್ಲಿ ಬೆಂಗಳೂರು ಕಂಬಳಕ್ಕೆ ಅಪ್ಪು ಹೆಸರನ್ನೇ ಇಟ್ಟಿದ್ದಾರೆ. 
 

ಕರಾವಳಿಯ ಮೈನವರಿಳಿಸೋ ಸ್ಪರ್ಧೆ ಅಂದ್ರೆ ಅದು ಕಂಬಳ(Kambala).ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ಕಂಬಳ ಆಯೋಜನೆಗೊಳ್ತಿದೆ. ಈಗಾಗಲೇ ಕೆರೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ವಿಶೇಷವೆಂದರೆ ಬೆಂಗಳೂರು(Bengaluru) ಕಂಬಳದ ಜೋಡುಕೆರೆಗಳಿಗೆ ಕರುನಾಡ ಮನೆಮಗ ಪುನೀತ್(Puneeth Rajkumar) ಮತ್ತು ರಾಜಕುಮಾರ್(Rajkumar) ಹೆಸರನ್ನ ಕಂಬಳಕ್ಕೆ ಇಡಲು ನಿರ್ಧರಿಸಿದ್ದಾರೆ. ಕಂಬಳ ಆಯೋಜಕರ ನಿರ್ಧಾರ ರಾಜ್‌ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಹರ್ಷಕ್ಕೂ ಕಾರಣವಾಗಿದೆ. ಬೆಂಗಳೂರು ಕಂಬಳ ನಮ್ಮ ಕಂಬಳ ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುತ್ತಿರುವ ಜೋಡುಕೆರೆ ಕಂಬಳಕ್ಕೆ ಇಷ್ಟು ದಿನ ಹೆಸರು ಫಿಕ್ಸ್ ಆಗಿರಲಿಲ್ಲ. ಕರಾವಳಿಯಲ್ಲಿ ನಡೆಯುವ ಕಂಬಳ ಕೆರೆಗಳಿಗೆ ಸೂರ್ಯ-ಚಂದ್ರ, ಕೋಟಿ-ಚೆನ್ನಯ, ರಾಮ-ಲಕ್ಷ್ಮಣ, ಕಾಂತಬಾರೆ-ಬೂದಬಾರೆ ಎಂಬಿತ್ಯಾದಿ ಹೆಸರುಗಳಿವೆ. ಆದ್ರೆ, ಬೆಂಗಳೂರಲ್ಲಿ ನಡೆಯುತ್ತಿರೋ ಮೊದಲ ಕಂಬಳಕ್ಕೆ ಯಾವ ಹೆಸರಿಡಬ್ಕೇಕು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಸದ್ಯ ಬೆಂಗಳೂರು ಕಂಬಳಕ್ಕೆ ಕನ್ನಡದ ಕಣ್ಮಣಿ ರಾಜ್‌ಕುಮಾರ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿ ಪುನೀತ್-ರಾಜ್ ಕಂಬಳ ಎಂದು ನಾಮಕರಣ ಮಾಡಲಾಗಿದೆ.ಈಗಾಗಲೇ ಬೆಂಗಳೂರು ಕಂಬಳದ ಸಿದ್ಧತೆ ಪೂರ್ಣಗೊಂಡಿದ್ದು ಕಂಬಳ ಕೆರೆಗಾಗಿ ಮತ್ತು ಇತರ ಬಳಕೆಗಾಗಿ ಪ್ಯಾಲೇಸ್ ಗ್ರೌಂಡ್‌ನಲ್ಲಿ 2 ಬೋರ್‌ವೆಲ್ ಕೊರೆಸಲಾಗಿದೆ. 2 ಬೋರ್‌ವೆಲ್‌ನಲ್ಲೂ ಯಥೇಚ್ಛವಾಗಿ ನೀರು ದೊರಕಿದ್ದು ಕಂಬಳಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಒಂದು ಕಾಲದಲ್ಲಿ ಸರ್ಕಸ್ ನಡೆಯುತ್ತಿದ್ದ ಈ ಗ್ರೌಂಡ್ ಕ್ರಮೇಣ ಕಸದ ರಾಶಿ, ಮುಳ್ಳುಗಂಟೆಗಳಿಂದ ಹಾಳಾಗಿತ್ತು. ಈಗ ಕಂಬಳಕ್ಕಾಗಿ ಗ್ರೌಂಡ್ ಸ್ವಚ್ಚಗೊಳಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಪ್ರೀತಿಸಿ ನಿಖಾ ಆದವರಿಗೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ: ರಕ್ಷಣೆಗಾಗಿ ಎಸ್ಪಿ ಕಚೇರಿ ಮೆಟ್ಟಿಲು ಹತ್ತಿದ ಲವ್‌ ಬರ್ಡ್ಸ್!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more