ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more