ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

Published : Dec 10, 2025, 10:30 PM IST
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್, ತಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ರೈತರತ್ನ, ಅಸಮಾನ್ಯ ಕನ್ನಡಿಗರಂತಹ ಯಶಸ್ವಿ ಕಾರ್ಯಕ್ರಮಗಳ ನಂತರ, ಈಗ ಸರಣಿ ವೈಫಲ್ಯಗಳನ್ನು ಮೆಟ್ಟಿ, ಪುಟಿದೆದ್ದ ಸಾಮಾನ್ಯ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಹೊಸ ಹೆಜ್ಜೆ ಇಟ್ಟಿವೆ.

ಬೆಂಗಳೂರು (ಡಿ.10): ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಕೇವಲ ಸುದ್ದಿ ಮಾಧ್ಯಮಗಳಾಗಿ ಉಳಿಯದೆ, ಸಾಮಾಜಿಕ ಜವಾಬ್ದಾರಿಯ ಮೂಲಕ ಜನರ ಮನಸ್ಸು ಗೆದ್ದಿವೆ. ನೆಲ, ಜಲ, ಭಾಷೆ ವಿಷಯದಲ್ಲಿ ರಾಜಿ ಇಲ್ಲದ ವರದಿಗಾರಿಕೆ ಜೊತೆಗೆ, ಸಮಾಜಕ್ಕೆ ಕಷ್ಟ ಬಂದಾಗ ನೆರವಿಗೆ ಧಾವಿಸಿವೆ.

ಮಾಧ್ಯಮಗಳು ಈವರೆಗೆ ರೈತರತ್ನ, ಅಸಮಾನ್ಯ ಕನ್ನಡಿಗ, ಶೌರ್ಯ ಪ್ರಶಸ್ತಿ, ಮಹಿಳಾ ಸಾಧಕಿಯರು ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಧಕರನ್ನು ಗುರುತಿಸಿ ಗೌರವಿಸಿವೆ. ಇವುಗಳಲ್ಲಿ ಗುರುತಿಸಲ್ಪಟ್ಟ ಅನೇಕರು ನಂತರ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೂ ಆಯ್ಕೆಯಾಗಿದ್ದಾರೆ. 'ಕರ್ನಾಟಕದ 7 ಅದ್ಭುತಗಳು' ಮತ್ತು 'ವನ್ಯಜೀವಿ ಸಂರಕ್ಷಣಾ ಅಭಿಯಾನ'ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಯಶಸ್ವಿಯಾಗಿವೆ.

ಈಗ, ಸಂಸ್ಥೆಯು ಮತ್ತೊಂದು ಹೆಜ್ಜೆ ಇಟ್ಟಿದ್ದು, ಸಾಮಾನ್ಯರಲ್ಲಿ ಅಸಾಮಾನ್ಯ ಸಾಧನೆ ಮಾಡಿದವರನ್ನು ಗುರುತಿಸುತ್ತಿದೆ. ಸರಣಿ ವೈಫಲ್ಯಗಳು ಮತ್ತು ಸವಾಲುಗಳ ನಡುವೆಯೂ ಪುಟಿದೆದ್ದ ಕನ್ನಡಿಗರಿಗೆ ಗೌರವ ನೀಡಲಾಗುತ್ತಿದೆ.

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more