ಡಂಪಿಗ್ ಯಾರ್ಡ್ ಆಗಿ ಬದಲಾಗ್ತಿದ್ಯಾ ಅಂಡರ್ ಪಾಸ್? ಕಾಮಗಾರಿ ಪೂರ್ಣಗೊಳಿಸುವಂತೆ ಜನರ ಆಗ್ರಹ

ಡಂಪಿಗ್ ಯಾರ್ಡ್ ಆಗಿ ಬದಲಾಗ್ತಿದ್ಯಾ ಅಂಡರ್ ಪಾಸ್? ಕಾಮಗಾರಿ ಪೂರ್ಣಗೊಳಿಸುವಂತೆ ಜನರ ಆಗ್ರಹ

Published : Oct 28, 2023, 11:12 AM ISTUpdated : Oct 28, 2023, 11:14 AM IST

ಆ ಅಂಡರ್ ಪಾಸ್ ಸ್ಟಾಪ್ ಆಗಿ ಬರೋಬ್ಬರಿ ಆರೇಳು ವರ್ಷಗಳೇ ಕಳೆದವು. ಅತ್ತ ಅಂಡರ್ ಪಾಸ್ ಅಂತೂ ಓಪನ್ ಆಗಿಲ್ಲ. ಸದ್ಯ ಈ ಅಂಡರ್ ಪಾಸ್ ಡಂಪಿಗ್ ಯಾರ್ಡ್ ಆಗಿ ಬದಲಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾದ್ರೆ ಈ ಅಂಡರ್ ಪಾಸ್ ಯಾವುದು? ಅಷ್ಟಕ್ಕೂ ಇದು ನಿಂತಿದ್ಯಾಕೆ ಅಂತೀರಾ? ಈ ಸ್ಟೋರಿ ನೋಡಿ.

ಕಾಮಗಾರಿ ಸ್ಟಾಪ್ ಆಗಿ ವರ್ಷಗಳೇ ಕಳೆದಿರುವ ಅಂಡರ್ ಪಾಸ್. ಇನ್ನೊಂದು ಬದಿಯಲ್ಲಿ ಅಂಡರ್ ಪಾಸ್ ಗೆ ಅಡ್ಡಲಾಗಿರುವ ಗೋಡೆ. ಇದರ ನಡುವೆ ಕಸದ ರಾಶಿ. ಇದು ಬೆಂಗಳೂರಿನ(Bengaluru) ಕಂಠೀರವ ಸ್ಟುಡಿಯೋ(Kanteerava Studio) ಬಳಿ ಅರ್ಧಕ್ಕೇ ಕಾಮಗಾರಿ ನಿಲ್ಲಿಸಿರು ಅಂಡರ್ ಪಾಸ್ ಬಳಿ ಕಂಡುಬರುವ ದೃಶ್ಯಗಳು. ಐಟಿ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಂಟ್ರೋಲ್ಗಾಗಿ ಫ್ಲೈ ಓವರ್, ಅಂಡರ್ ಪಾಸ್(Underpass) ನಿರ್ಮಾಣವಾಗ್ತಿವೆ. ಆದ್ರೆ, ನಂದಿನಿ ಲೇಔಟ್ ಮತ್ತು ಪೀಣ್ಯ ನಡುವೆ ಸಂಪರ್ಕ ಕಲ್ಪಿಸಲು 2014 ರ ಪ್ರಾರಂಭಗೊಂಡಿದ್ದ ಈ ಅಂಡರ್ ಪಾಸ್ ಮಾತ್ರ ಇನ್ನೂ ಮುಗಿದಿಲ್ಲ. ಇದಕ್ಕೆ ಕಾರಣ ಆಗಿನ ಲ್ಯಾಂಡ್ ಅಕ್ವೇಸೀಷನ್ನಲ್ಲಿ ಉಂಟಾದ  ಕೆಲವು ಅಡೆತಡೆಗಳು. ಇದರಿಂದ ಕಾಮಗಾರಿ ಆರಂಭಿಸಿದ್ದ ಬಿಡಿಎ ಅರ್ಧಕ್ಕೇ ನಿಲ್ಲಿಸಿ ಗೋಡೆ ನಿಲ್ಲಿಸಲಾಗಿತ್ತು. ಸದ್ಯ ಈ ಅಂಡರ್ ಪಾಸ್‌ಗೆ ಸಂಬಂಧಿಸಿದ ಲ್ಯಾಂಡ್ ಸಮಸ್ಯೆ ಬಗೆಹರಿದಿದೆ. ಆದ್ರೆ ಕೆಲಸ ಮಾತ್ರ ಮುಂದುವರೆದಿಲ್ಲ. ಹೀಗಾಗಿ ಅರ್ಧಂಬರ್ಧ ಕಾಮಗಾರಿಯಾಗಿರೋ ಅಂಡರ್ ಪಾಸ್ ಪುಂಡ ಪೋಕರಿಗಳ ಅಡ್ಡೆಯಾಗಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಈ ಪ್ರದೇಶದಲ್ಲಿ ಓಡಾಡೋಕು ಭಯವಾಗುತ್ತಿದೆ ಎನ್ನುತ್ತಿದ್ದಾರೆ ಸ್ಥಳೀಯರು. ಪುಂಡ ಪೋಕರಿಗಳ ಭಯ ಒಂದು ಕಡೆಯಾದ್ರೆ, ಕಸದ ಸಮಸ್ಯೆ ಮತ್ತೊಂದ್ಕಡೆ. ಅಂಡರ್‌ಪಾಸ್ ಬಳಿ ರಾಶಿ ರಾಶಿ ಕಸ ಸುರಿಯುತ್ತಿದ್ದು, ಡಂಪಿಂಗ್ ಯಾರ್ಡ್ ಆಗಿ ಮಾರ್ಪಟ್ಟಿದೆ. ಮೂಗು ಮುಚ್ಚಿಕೊಂಡೇ ಜನ ಓಡಾಡುವ ಪರಿಸ್ಥಿತಿ ಎದುರಾಗಿದೆ. 

ಇದನ್ನೂ ವೀಕ್ಷಿಸಿ:  ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more