ಡಂಪಿಗ್ ಯಾರ್ಡ್ ಆಗಿ ಬದಲಾಗ್ತಿದ್ಯಾ ಅಂಡರ್ ಪಾಸ್? ಕಾಮಗಾರಿ ಪೂರ್ಣಗೊಳಿಸುವಂತೆ ಜನರ ಆಗ್ರಹ

ಡಂಪಿಗ್ ಯಾರ್ಡ್ ಆಗಿ ಬದಲಾಗ್ತಿದ್ಯಾ ಅಂಡರ್ ಪಾಸ್? ಕಾಮಗಾರಿ ಪೂರ್ಣಗೊಳಿಸುವಂತೆ ಜನರ ಆಗ್ರಹ

Published : Oct 28, 2023, 11:12 AM ISTUpdated : Oct 28, 2023, 11:14 AM IST

ಆ ಅಂಡರ್ ಪಾಸ್ ಸ್ಟಾಪ್ ಆಗಿ ಬರೋಬ್ಬರಿ ಆರೇಳು ವರ್ಷಗಳೇ ಕಳೆದವು. ಅತ್ತ ಅಂಡರ್ ಪಾಸ್ ಅಂತೂ ಓಪನ್ ಆಗಿಲ್ಲ. ಸದ್ಯ ಈ ಅಂಡರ್ ಪಾಸ್ ಡಂಪಿಗ್ ಯಾರ್ಡ್ ಆಗಿ ಬದಲಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಾಗಾದ್ರೆ ಈ ಅಂಡರ್ ಪಾಸ್ ಯಾವುದು? ಅಷ್ಟಕ್ಕೂ ಇದು ನಿಂತಿದ್ಯಾಕೆ ಅಂತೀರಾ? ಈ ಸ್ಟೋರಿ ನೋಡಿ.

ಕಾಮಗಾರಿ ಸ್ಟಾಪ್ ಆಗಿ ವರ್ಷಗಳೇ ಕಳೆದಿರುವ ಅಂಡರ್ ಪಾಸ್. ಇನ್ನೊಂದು ಬದಿಯಲ್ಲಿ ಅಂಡರ್ ಪಾಸ್ ಗೆ ಅಡ್ಡಲಾಗಿರುವ ಗೋಡೆ. ಇದರ ನಡುವೆ ಕಸದ ರಾಶಿ. ಇದು ಬೆಂಗಳೂರಿನ(Bengaluru) ಕಂಠೀರವ ಸ್ಟುಡಿಯೋ(Kanteerava Studio) ಬಳಿ ಅರ್ಧಕ್ಕೇ ಕಾಮಗಾರಿ ನಿಲ್ಲಿಸಿರು ಅಂಡರ್ ಪಾಸ್ ಬಳಿ ಕಂಡುಬರುವ ದೃಶ್ಯಗಳು. ಐಟಿ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಂಟ್ರೋಲ್ಗಾಗಿ ಫ್ಲೈ ಓವರ್, ಅಂಡರ್ ಪಾಸ್(Underpass) ನಿರ್ಮಾಣವಾಗ್ತಿವೆ. ಆದ್ರೆ, ನಂದಿನಿ ಲೇಔಟ್ ಮತ್ತು ಪೀಣ್ಯ ನಡುವೆ ಸಂಪರ್ಕ ಕಲ್ಪಿಸಲು 2014 ರ ಪ್ರಾರಂಭಗೊಂಡಿದ್ದ ಈ ಅಂಡರ್ ಪಾಸ್ ಮಾತ್ರ ಇನ್ನೂ ಮುಗಿದಿಲ್ಲ. ಇದಕ್ಕೆ ಕಾರಣ ಆಗಿನ ಲ್ಯಾಂಡ್ ಅಕ್ವೇಸೀಷನ್ನಲ್ಲಿ ಉಂಟಾದ  ಕೆಲವು ಅಡೆತಡೆಗಳು. ಇದರಿಂದ ಕಾಮಗಾರಿ ಆರಂಭಿಸಿದ್ದ ಬಿಡಿಎ ಅರ್ಧಕ್ಕೇ ನಿಲ್ಲಿಸಿ ಗೋಡೆ ನಿಲ್ಲಿಸಲಾಗಿತ್ತು. ಸದ್ಯ ಈ ಅಂಡರ್ ಪಾಸ್‌ಗೆ ಸಂಬಂಧಿಸಿದ ಲ್ಯಾಂಡ್ ಸಮಸ್ಯೆ ಬಗೆಹರಿದಿದೆ. ಆದ್ರೆ ಕೆಲಸ ಮಾತ್ರ ಮುಂದುವರೆದಿಲ್ಲ. ಹೀಗಾಗಿ ಅರ್ಧಂಬರ್ಧ ಕಾಮಗಾರಿಯಾಗಿರೋ ಅಂಡರ್ ಪಾಸ್ ಪುಂಡ ಪೋಕರಿಗಳ ಅಡ್ಡೆಯಾಗಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಈ ಪ್ರದೇಶದಲ್ಲಿ ಓಡಾಡೋಕು ಭಯವಾಗುತ್ತಿದೆ ಎನ್ನುತ್ತಿದ್ದಾರೆ ಸ್ಥಳೀಯರು. ಪುಂಡ ಪೋಕರಿಗಳ ಭಯ ಒಂದು ಕಡೆಯಾದ್ರೆ, ಕಸದ ಸಮಸ್ಯೆ ಮತ್ತೊಂದ್ಕಡೆ. ಅಂಡರ್‌ಪಾಸ್ ಬಳಿ ರಾಶಿ ರಾಶಿ ಕಸ ಸುರಿಯುತ್ತಿದ್ದು, ಡಂಪಿಂಗ್ ಯಾರ್ಡ್ ಆಗಿ ಮಾರ್ಪಟ್ಟಿದೆ. ಮೂಗು ಮುಚ್ಚಿಕೊಂಡೇ ಜನ ಓಡಾಡುವ ಪರಿಸ್ಥಿತಿ ಎದುರಾಗಿದೆ. 

ಇದನ್ನೂ ವೀಕ್ಷಿಸಿ:  ಕಡಲ ನಗರಿಯಲ್ಲಿ ಹೆಚ್ಚಾಯ್ತು ಮರಳಿನ ಸಮಸ್ಯೆ: ಕೃತಕ ಅಭಾವಕ್ಕೆ ಗುತ್ತಿಗೆದಾರರು ಕಂಗಾಲು

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more