ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

Aug 21, 2021, 6:12 PM IST

ವಿಜಯಪುರ ( ಆ. 21) ವಿಜಯಪುರದ ಬಳಿ ಆಲಮಟ್ಟಿ ಡ್ಯಾಂಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ. ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಸಚಿವರು ಸಿಎಂ ಜತೆಗಿದ್ದರು.

ಬೊಮ್ಮಾಯಿ ಬೆಳಗಾವಿ ಭೇಟಿ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸಿಎಂ  ಗಂಗಾ ಪೂಜೆ ನೆರವೇರಿಸಿದ್ದಾರೆ. ಉತ್ತರ ಕರ್ನಾಟಕದ ನಾಯಕರು ಇದ್ದರು.  ಈ ವರ್ಷ ಮುಂಗಾರು ಅಬ್ಬರಿಸಿದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಸಿಎಂ ಉತ್ತರ ಕರ್ನಾಟಕ ಪ್ರವಾಸದಲ್ಲಿ ನಡೆಸಿದ್ದಾರೆ.  ಕೊರೋನಾ ಕಾರಣಕ್ಕೆ ಸೀಮಿತ ಅಧಿಕಾರಿಗಳನ್ನು ಮಾತ್ರ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು.