Blue Stone Farming: ರಾಜ್ಯದಲ್ಲೇ ಮೊದಲ ಸಮುದ್ರ ಪಾಚಿ, ನೀಲಿಕಲ್ಲು ಕೃಷಿಗೆ  ಚಾಲನೆ

Blue Stone Farming: ರಾಜ್ಯದಲ್ಲೇ ಮೊದಲ ಸಮುದ್ರ ಪಾಚಿ, ನೀಲಿಕಲ್ಲು ಕೃಷಿಗೆ ಚಾಲನೆ

Suvarna News   | Asianet News
Published : Dec 02, 2021, 02:50 PM ISTUpdated : Dec 02, 2021, 02:52 PM IST

*  ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಾರ್ಯಕ್ರಮ
*  ಪರ್ಯಾಯ ಉದ್ಯೋಗ, ಹೆಚ್ಚು ಲಾಭ ಒದಗಿಸುವ ಯೋಜನೆ
*  ನೀಲಿ ಕಲ್ಲುಗಳು ಬಹಳ ರುಚಿಕರವಾಗಿದ್ದು ಬಹುಬೇಡಿಕೆ ವಸ್ತು
 

ಕಾರವಾರ(ಡಿ.02): ಮೀನುಗಾರಿಕಾ ಕ್ಷೇತ್ರಕ್ಕೆ ಹೆಚ್ಚು ಪ್ರೋತ್ಸಾಹ ಒದಗಿಸುವ ಹಾಗೂ ಪರ್ಯಾಯ ಉದ್ಯೋಗ ಪೂರೈಸೋ ದೃಷ್ಠಿಯಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿ ಸಮುದ್ರ ಪಾಚಿ ಹಾಗೂ ನೀಲಿಕಲ್ಲು ಕೃಷಿಯನ್ನು ಪ್ರಾರಂಭಿಸಲಾಗಿದೆ. 

ಪ್ರಥಮ ಬಾರಿಗೆ ಸಮುದ್ರ ಪಾಚಿ ಕೃಷಿಯನ್ನು ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಕೈಗೊಳ್ಳಲಾಗಿದ್ದು, ತಲಾ 50 ಕೆ.ಜಿ. ಸಾಮರ್ಥ್ಯದ 10 ರಾಫ್ಟ್ ಗಳನ್ನು ಹಾಕಲಾಗಿದೆ. ಇದರೊಂದಿಗೆ ಕಾರವಾರ ತಾಲೂಕಿನ ಕಾಳಿನದಿ ಅಳಿವೆಯಲ್ಲಿ ಪ್ರಥಮ ಬಾರಿಗೆ ನೀಲಿಕಲ್ಲು ಕೃಷಿ (Bivalve culture)ಯನ್ನು ರಾಫ್ಟ್ ವಿಧಾನದಲ್ಲಿ ಕೈಗೊಳ್ಳಲಾಗಿದೆ. ನಂದನಗದ್ದಾದ 10 ಮೀನುಗಾರ ಮಹಿಳೆಯರು‌ ತಮ್ಮ ಸಂಗಡಿಗರ ಜತೆ ಸೇರಿ 10 ರಾಫ್ಟ್ ಗಳನ್ನು ಹಾಕಿದ್ದಾರೆ. ಇವೆರಡು ಕೂಡಾ ಮೀನುಗಾರರಿಗೆ, ಅದರಲ್ಲೂ ಮೀನುಗಾರ ಮಹಿಳೆಯರಿಗೆ ಉತ್ತಮ ಪರ್ಯಾಯ ಉದ್ಯೋಗವಾಗಿದ್ದು, ಹೆಚ್ಚು ಲಾಭ ಒದಗಿಸುವ ಯೋಜನೆಯಾಗಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳನ್ನು ಮೀನುಗಾರಿಕೆ ಇಲಾಖೆ ಆಯ್ಕೆ ಮಾಡುತ್ತದೆ. ಶೇ.60ರಷ್ಟು ಸಬ್ಸಿಡಿ ಮಹಿಳೆಯರಿಗೆ ಹಾಗೂ ಶೇಕಡಾ 40ರಷ್ಟು ಸಬ್ಸಿಡಿ ಪುರುಷ ಫಲಾನುಭವಿಗಳಿಗೆ ನೀಡಲಾಗುತ್ತದೆ ಅಂತ ಸ್ಥಳೀಯರು ಮೀನುಗಾರರಾದ ವಿನಾಯಕ ಹರಿಕಾಂತ್, ದೇವರಾಜ್ ಅವರು ತಿಳಿಸಿದ್ದಾರೆ. 

Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

ಅಂದಹಾಗೆ, ಸಮುದ್ರ ಪಾಚಿಯನ್ನು ಒಂದು ಕಂಬಕ್ಕೆ ಕಟ್ಟಿ ಸಮುದ್ರದ ನೀರಿನಲ್ಲಿ ಇಳಿಬಿಡಲಾಗುತ್ತದೆ. ಸುಮಾರು ನಾಲ್ಕು ತಿಂಗಳ ಬಳಿಕ ಈ ಪಾಚಿ ದ್ವಿಗುಣಗೊಳ್ಳಲಿದೆ. ಈ ಬೆಳೆಯನ್ನು ಕಟಾವು ಮಾಡಿ ಔಷಧಿ, ಸೌಂದರ್ಯವರ್ಧಕಗಳಲ್ಲಿ ಬಳಸಲಾಗುತ್ತದೆ. ಇದೇ ಕಾರಣದಿಂದ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಕೂಡ ಈ ಪಾಚಿಗೆ ಇದೆ. ಇನ್ನು ನೀಲಿ ಕಲ್ಲುಗಳನ್ನು ರೋಪ್ ನಂತೆ ಕಟ್ಟಿ ನೀರಿನಲ್ಲಿ ಇಳಿಬಿಡಲಾಗುತ್ತದೆ. ಇದು ಬೆಳೆದು ದೊಡ್ಡ ಗಾತ್ರ ಹೊಂದಿದ ಬಳಿಕ ಮಾರುಕಟ್ಟೆಗೆ ನೀಡಲಾಗುತ್ತದೆ. ನೀಲಿ ಕಲ್ಲುಗಳು ಬಹಳ ರುಚಿಕರವಾಗಿದ್ದು, ಸುಕ್ಕಾ, ಚಿಲ್ಲಿಯಂಥ ಖಾದ್ಯಗಳಿಗೆ ಹೆಚ್ಚಾಗಿ ಬಳಸಲಾಗುತ್ತದೆ. ವಿಶೇಷವಾಗಿ ಕರ್ನಾಟಕ ಹಾಗೂ ಗೋವಾದ ಕರಾವಳಿಯ ಭಾಗದಲ್ಲಿ, ಹೋಟೆಲ್ ಗಳಲ್ಲಿ ಇದಕ್ಕೆ ಭಾರೀ ಬೇಡಿಕೆಯಿದೆ. ಅಧಿಕಾರಿಗಳು ಹೇಳುವಂತೆ, ರಾಜ್ಯದಲ್ಲೇ ಮೊದಲ ಪ್ರಯತ್ನವಾಗಿ ಸಮುದ್ರ ಪಾಚಿ ಹಾಗೂ ನೀಲಿಕಲ್ಲುಗಳ ಕೃಷಿಯನ್ನು ಕುಮಟಾ ಹಾಗೂ ಕಾರವಾರದಲ್ಲಿ ಕೈಗೊಳ್ಳಲಾಗಿದೆ. ಫಲಿತಾಂಶಕ್ಕಾಗಿ ನಾವು ಕಾಯುತ್ತಿದ್ದೇವೆ. ಇವುಗಳಿಗೆ ಹೆಚ್ಚು ಉಪ್ಪಿನಂಶ ಇರುವ ನೀರು ಬೇಕಾಗುತ್ತದೆ. ಉಪ್ಪಿನಂಶ ಕಡಿಮೆಯಾದರೂ ಕೂಡ ಇವುಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀಳುವುದರಿಂದ, ಉಪ್ಪಿನಂಶ ಸಮಪ್ರಮಾಣದಲ್ಲಿ ನೋಡಿಕೊಳ್ಳಲು ಹೆಚ್ಚಿನ ಗಮನ ವಹಿಸಲಾಗುತ್ತಿದೆ ಎಂದು ಹೇಳುತ್ತಾರೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಪಿ.ನಾಗರಾಜು. 

ಒಟ್ಟಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರರಿಗೆ ಪರ್ಯಾಯ ಉದ್ಯೋಗವಾಗಿ ಸಮುದ್ರ ಪಾಚಿ ಹಾಗೂ ನೀಲಿ ಕಲ್ಲುಗಳ ಕೃಷಿಯನ್ನು ಪ್ರಾರಂಭಿಸಲಾಗಿದ್ದು, ಮತ್ಸ್ಯ ಕ್ಷಾಮ ಹಾಗೂ ಮೀನುಗಾರಿಕೆ ನಿಷೇಧವಿರುವ ಸಮಯದಲ್ಲಿ ಈ ಉದ್ಯೋಗ ಮೀನುಗಾರರಿಗೆ ಬಹಳಷ್ಟು ಉಪಕಾರಿಯಾಗಲಿದೆ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more