ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more