ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more