ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more