ಬಾಗಲಕೋಟೆ: ವಾಯವ್ಯ ಸಾರಿಗೆಗೆ ಗುಜರಿ ಬಸ್ ಖರೀದಿಸಿದ್ರೆ ಕರವೇಯಿಂದ ಉಗ್ರ ಹೋರಾಟ

ಬಾಗಲಕೋಟೆ: ವಾಯವ್ಯ ಸಾರಿಗೆಗೆ ಗುಜರಿ ಬಸ್ ಖರೀದಿಸಿದ್ರೆ ಕರವೇಯಿಂದ ಉಗ್ರ ಹೋರಾಟ

Published : Jun 05, 2022, 12:26 PM IST

*  ಬಿಎಂಟಿಸಿ ಗುಜರಿ ಬಸ್‌ಗಳ ಖರೀದಿಗೆ ಮುಂದಾದ ವಾಯವ್ಯ ಕ.ರಾ.ಸಾ.ಸಂಸ್ಥೆ
*  50 ಸಾವಿರ- 1 ಲಕ್ಷ ರೂ.ಗೆ ಮಾರಾಟ ಮಾಡಲು ಮುಂದಾಗಿರೋ ಬಿಎಂಟಿಸಿ ಸಂಸ್ಥೆ
*  ಸಂಸ್ಥೆ ಕ್ರಮಕ್ಕೆ ಬಾಗಲಕೋಟೆ ಜಿಲ್ಲೆಯಲ್ಲಿ ತೀವ್ರ ವಿರೋಧ, ಹೋರಾಟಕ್ಕೆ ನಿರ್ಧಾರ
 

ಬಾಗಲಕೋಟೆ(ಜೂ.05):  ರಾಜ್ಯದಲ್ಲಿ ಆಗಾಗ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗ್ತಿದೆ ಎಂಬ ಕೂಗು ಕೇಳುತ್ತಲೇ ಬರ್ತಿದೆ, ಆದ್ರೆ ಅದರ ಸಾಲಿಗೆ ಈಗ ಮತ್ತೊಂದು ವಿವಾದ ಶುರುವಾಗಿದೆ. ರಾಜ್ಯದಲ್ಲಿ ಬಿಎಂಟಿಸಿ ಗುಜರಿಗೆ ಹಾಕಲು ಮುಂದಾಗಿರೋ ಸರ್ಕಾರಿ ಬಸ್ಗಳನ್ನ ಇದೀಗ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಖರೀದಿಗೆ ಮುಂದಾಗಿದ್ದು, ಈ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಇದರ ಬೆನ್ನಲ್ಲೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯ ಬಸ್ಗಳು ಓಡಾಡುವ ಜಿಲ್ಲೆಗಳಲ್ಲಿ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. 

ರಾಜ್ಯದಲ್ಲಿ ಹೊಸ ಬಸ್‌ನಲ್ಲಿ ಕುಳಿತು ಸಂಭ್ರಮಿಸಬೇಕಾಗಿದ್ದ ಉತ್ತರ ಕರ್ನಾಟಕದ ಜನರು ಇನ್ನು ಮುಂದೆ ಗುಜರಿ ಅಂದರೆ ಮೋಡಕಾಕ್ಕೆ ಹೋಗುವ ಬಸ್ಸಿನಲ್ಲಿ ಕುಳಿತು ಸರ್ಕಾರಕ್ಕೆ ಹಿಡಿಶಾಪ ಹಾಕಬೇಕಾದ ಅನಿವಾರ್ಯತೆ ಪರಿಸ್ಥಿತಿ ಬಂದರೂ ಬರಬಹುದು. ಹೌದು. ಬೆಂಗಳೂರು ನಗರದಲ್ಲಿ ಬಿಎಂಟಿಸಿ ಓಡಿಸುತ್ತಿದ್ದ ಅಂದಾಜು 25 ಸಾವಿರ ಬಸ್‌ಗಳನ್ನ ಗುಜರಿಗೆ ಹಾಕಲು ನಿರ್ಧರಿಸಿದೆಯಂತೆ. ಈ ಬಸ್‌ಗಳು ಬರೋಬ್ಬರಿ 8ರಿಂದ 9 ಲಕ್ಷ ಕಿಮೀ ಓಡಿದ್ದು, ಇವುಗಳನ್ನ ಬಿಎಂಟಿಸಿ ಗುಜರಿಗೆ ಹಾಕಲು ಮುಂದಾಗಿದೆ. ಇತ್ತ ವಾಯವ್ಯ ಕರ್ನಾಟಕದ ರಸ್ತೆ ಸಾರಿಗೆ ಸಂಸ್ಥೆ ಆ ಬಸ್‌ಗಳನ್ನ 50 ಸಾವಿರ ದಿಂದ ಅಂದಾಜು 1 ಲಕ್ಷ ರೂಪಾಯಿವರೆಗೆ ಖರೀದಿ ಮಾಡಲು ಮುಂದಾಗಿದೆ ಎನ್ನಲಾಗುತ್ತಿದ್ದು, ಈ ಸಂಬಂಧ ಅಧಿಕಾರಿಗಳ ಮಟ್ಟದಲ್ಲೂ ಮೊದಲ ಹಂತದ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಚ್ಚರಿಯ ಸಂಗತಿ ಅಂದ್ರೆ ಉತ್ತಮ ರಸ್ತೆಗಳನ್ನ ಹೊಂದಿರೋ ಬೆಂಗಳೂರಿನಂತಹ ಮಹಾನಗರದಲ್ಲಿಯೇ ಸಂಚಾರಕ್ಕೆ ಯೋಗ್ಯವಲ್ಲದ ಬಸ್ಗಳನ್ನ ಇದೀಗ ಖರೀದಿಸಿ, ಉತ್ತರ ಕರ್ನಾಟಕದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನ್ನ ವ್ಯಾಪ್ತಿಯ ಜಿಲ್ಲೆಗಳಲ್ಲಿ ಯಾವ ರೀತಿ ಸಂಚಾರಕ್ಕೆ ಬಿಡುತ್ತೇ ಅನ್ನೋದೆ ಯಕ್ಷಪ್ರಶ್ನೆಯಾಗಿದೆ. ಆದ್ರೆ ಗುಜರಿ ಬಸ್ಗಳನ್ನ ಖರೀದಿಸಲು ಮುಂದಾಗಲು ಅಧಿಕಾರಿಗಳು ಮೊದಲ ಹಂತದಲ್ಲಿ ಮಾತುಕತೆ ನಡೆಸಿರೋದು ಈ ಭಾಗದ ಕನ್ನಡಪರ ಸಂಘಟನೆಗಳ ಹೋರಾಟಗಾರರಲ್ಲಿ ತೀವ್ರ ಆಕ್ರೋಶ ಜ್ವಾಲೆಯನ್ನ ಹುಟ್ಟಿಸುವಂತೆ ಮಾಡಿದೆ. 

India@75: ಬ್ರಿಟಿಷರ ಬಂದೂಕಿಗೆ ಎದೆಯೊಡ್ಡಿದ ದಿಟ್ಟೆ ಅಸ್ಸಾಂನ ಭೋಗೇಶ್ವರಿ

ಇನ್ನು ಗುಜರಿ ಬಸ್ಗಳನ್ನ ಖರೀದಿಸಿ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆ ಸೇರಿದಂತೆ ಕಿತ್ತೂರು ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂತಹ ಬಸ್ಗಳನ್ನ ಓಡಾಟಕ್ಕೆ ಬಿಡಲು ಮುಂದಾಗಿರೋದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈ ಮಧ್ಯೆ ಈಗಾಗಲೇ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಗುಜರಿ ಬಸ್ಗಳನ್ನ ಖರೀದಿಸದಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದು, ಇದರ ಬೆನ್ನಲ್ಲೆ ಬಾಗಲಕೋಟೆಯಲ್ಲಿ ಕನ್ನಡಪರ ಸಂಘಟನೆಗಳು ಸಭೆ ಸೇರಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳ ನಿಲುವನ್ನು ಖಂಡಿಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸಾರಿಗೆ ಸಚಿವರು ಗುಜರಿ ಬಸ್ನಲ್ಲಿಯೇ ಕುಳಿತು ಮೊದಲು ಓಡಾಡಲಿ ಆನಂತರ ಯೋಗ್ಯವೆನಿಸಿದರೆ ಜನರ ಸಂಚಾರಕ್ಕೆ ಬಿಡಲಿ, ಒಂದೊಮ್ಮೆ ಗುಜರಿ ಬಸ್ಗಳನ್ನ ಖರೀದಿಸಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಓಡಾಡಲು ಬಿಟ್ಟಲ್ಲಿ, ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಒಟ್ಟಿನಲ್ಲಿ ಇನ್ನೂ ಸಹ ಅಧಿಕಾರಿಗಳ ಮಾತುಕತೆ ಹಂತದಲ್ಲಿರೋ ಬಿಎಂಟಿಸಿ ಗುಜರಿ ಬಸ್ಗಳ ಖರೀದಿ ವಿಚಾರವನ್ನು ಸರ್ಕಾರ ಕೈಬಿಡಬೇಕಿದೆ. ಇದು ಆಗದೇ ಹೋದಲ್ಲಿ ಕನ್ನಡಪರ ಸಂಘಟನೆಗಳಿಂದ ಹೋರಾಟ ಮಾತ್ರ ತಪ್ಪಿದ್ದಲ್ಲ. ಇಷ್ಟಕ್ಕೂ ತಮ್ಮ ತವರೂರಿನಲ್ಲಿಯೇ ಗುಜರಿಯಂತಹ ಬಸ್ಗಳನ್ನ ಓಡಿಸಿ  ಸಿಎಂ ಬೊಮ್ಮಾಯಿ ಕಂಟಕವಾಗ್ತಾರಾ ಅಥವಾ ಹೊಸ ಬಸ್‌ಗಳ ಖರೀದಿಗೆ ಅನುಮತಿ ನೀಡಿ ವಿವಾದಕ್ಕೆ ತೆರೆ ಎಳೆಯುತ್ತಾರಾ ಅಂತ ಕಾದು ನೋಡಬೇಕಿದೆ.
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more