ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

Published : Oct 12, 2022, 07:45 PM IST

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.

ಉತ್ತರಕನ್ನಡ(ಕಾರವಾರ): ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.


ನಿನ್ನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ (Karawara) ಹಾಗೂ ಕುಮುಟಾಕ್ಕೆ (Kumta)ಭೇಟಿ ನೀಡಿದ್ದ ಡಾ‌‌. ಸುಧಾಕರ್ (Dr. Sudhakar) ರಾತ್ರಿ ಭಟ್ಕಳದ ಸಮುದಾಯ ಆಸ್ಪತ್ರೆಗೆ (Bhatkala Comunity Hospital) ಭೇಟಿ ನೀಡಿದ್ದರು. ಅಲ್ಲಿಂದ ತೆರಳಿದ ಸಚಿವ ಡಾ.‌ಸುಧಾಕರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ (Sunil Naik) ಅವರ ಮನೆಯಲ್ಲಿ ತಂಗಿದ್ದರು. ಆರೋಗ್ಯ ಸಚಿವರಿಗೆ (Health Minister) ಭರ್ಜರಿ ಸ್ವಾಗತ ನೀಡಿದ್ದ ಸುನೀಲ್ ನಾಯ್ಕ್, ರಾತ್ರಿ ಮನೆಯಲ್ಲಿ ಬಡಗುತಿಟ್ಟು ಯಕ್ಷಗಾನ (Badagutittu Yakshagana)ಆಯೋಜಿಸಿದ್ದರು. 

ಭಟ್ಕಳದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರೂ ಯಕ್ಷಗಾನ ಮುಗಿಯುವರೆಗೆ ಕುಳಿತು ನೋಡಿದ್ದ ಆರೋಗ್ಯ ಸಚಿವರು ಯಕ್ಷಗಾನ ಕಲೆಗೆ ಮರು ಹೋಗಿದ್ದಾರೆ. ಆರೋಗ್ಯ ಸಚಿವರಿಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕ್ ಸಾಥ್‌ ನೀಡಿದ್ದರು. ಯಕ್ಷಗಾನ ಮುಗಿದ ಬಳಿಕ ಇತರರ ಸಹಾಯದಿಂದ ಸಚಿವ ಸುಧಾಕರ್ ಕಲಾವಿದರ ಪೋಷಾಕು ಧರಿಸಿದರು. ಅಲ್ಲದೇ ಆ ಪೋಷಾಕಿನಲ್ಲಿಯೇ ಸನ್ಮಾನ ಸ್ವೀಕರಿಸಿದರು. 

ಯಕ್ಷಗಾನದ ವೇದಿಕೆಯಲ್ಲಿ ಬಡಗುತಿಟ್ಟು ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.‌ಸುಧಾಕರ್ ಅವರು ನಂತರ ಇಂದು ಇಂದು ಬೆಳಗ್ಗೆ ಮಂಗಳೂರು ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more