ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

Published : Oct 12, 2022, 07:45 PM IST

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.

ಉತ್ತರಕನ್ನಡ(ಕಾರವಾರ): ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.


ನಿನ್ನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ (Karawara) ಹಾಗೂ ಕುಮುಟಾಕ್ಕೆ (Kumta)ಭೇಟಿ ನೀಡಿದ್ದ ಡಾ‌‌. ಸುಧಾಕರ್ (Dr. Sudhakar) ರಾತ್ರಿ ಭಟ್ಕಳದ ಸಮುದಾಯ ಆಸ್ಪತ್ರೆಗೆ (Bhatkala Comunity Hospital) ಭೇಟಿ ನೀಡಿದ್ದರು. ಅಲ್ಲಿಂದ ತೆರಳಿದ ಸಚಿವ ಡಾ.‌ಸುಧಾಕರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ (Sunil Naik) ಅವರ ಮನೆಯಲ್ಲಿ ತಂಗಿದ್ದರು. ಆರೋಗ್ಯ ಸಚಿವರಿಗೆ (Health Minister) ಭರ್ಜರಿ ಸ್ವಾಗತ ನೀಡಿದ್ದ ಸುನೀಲ್ ನಾಯ್ಕ್, ರಾತ್ರಿ ಮನೆಯಲ್ಲಿ ಬಡಗುತಿಟ್ಟು ಯಕ್ಷಗಾನ (Badagutittu Yakshagana)ಆಯೋಜಿಸಿದ್ದರು. 

ಭಟ್ಕಳದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರೂ ಯಕ್ಷಗಾನ ಮುಗಿಯುವರೆಗೆ ಕುಳಿತು ನೋಡಿದ್ದ ಆರೋಗ್ಯ ಸಚಿವರು ಯಕ್ಷಗಾನ ಕಲೆಗೆ ಮರು ಹೋಗಿದ್ದಾರೆ. ಆರೋಗ್ಯ ಸಚಿವರಿಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕ್ ಸಾಥ್‌ ನೀಡಿದ್ದರು. ಯಕ್ಷಗಾನ ಮುಗಿದ ಬಳಿಕ ಇತರರ ಸಹಾಯದಿಂದ ಸಚಿವ ಸುಧಾಕರ್ ಕಲಾವಿದರ ಪೋಷಾಕು ಧರಿಸಿದರು. ಅಲ್ಲದೇ ಆ ಪೋಷಾಕಿನಲ್ಲಿಯೇ ಸನ್ಮಾನ ಸ್ವೀಕರಿಸಿದರು. 

ಯಕ್ಷಗಾನದ ವೇದಿಕೆಯಲ್ಲಿ ಬಡಗುತಿಟ್ಟು ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.‌ಸುಧಾಕರ್ ಅವರು ನಂತರ ಇಂದು ಇಂದು ಬೆಳಗ್ಗೆ ಮಂಗಳೂರು ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more