ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

Published : Oct 12, 2022, 07:45 PM IST

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.

ಉತ್ತರಕನ್ನಡ(ಕಾರವಾರ): ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.


ನಿನ್ನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ (Karawara) ಹಾಗೂ ಕುಮುಟಾಕ್ಕೆ (Kumta)ಭೇಟಿ ನೀಡಿದ್ದ ಡಾ‌‌. ಸುಧಾಕರ್ (Dr. Sudhakar) ರಾತ್ರಿ ಭಟ್ಕಳದ ಸಮುದಾಯ ಆಸ್ಪತ್ರೆಗೆ (Bhatkala Comunity Hospital) ಭೇಟಿ ನೀಡಿದ್ದರು. ಅಲ್ಲಿಂದ ತೆರಳಿದ ಸಚಿವ ಡಾ.‌ಸುಧಾಕರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ (Sunil Naik) ಅವರ ಮನೆಯಲ್ಲಿ ತಂಗಿದ್ದರು. ಆರೋಗ್ಯ ಸಚಿವರಿಗೆ (Health Minister) ಭರ್ಜರಿ ಸ್ವಾಗತ ನೀಡಿದ್ದ ಸುನೀಲ್ ನಾಯ್ಕ್, ರಾತ್ರಿ ಮನೆಯಲ್ಲಿ ಬಡಗುತಿಟ್ಟು ಯಕ್ಷಗಾನ (Badagutittu Yakshagana)ಆಯೋಜಿಸಿದ್ದರು. 

ಭಟ್ಕಳದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರೂ ಯಕ್ಷಗಾನ ಮುಗಿಯುವರೆಗೆ ಕುಳಿತು ನೋಡಿದ್ದ ಆರೋಗ್ಯ ಸಚಿವರು ಯಕ್ಷಗಾನ ಕಲೆಗೆ ಮರು ಹೋಗಿದ್ದಾರೆ. ಆರೋಗ್ಯ ಸಚಿವರಿಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕ್ ಸಾಥ್‌ ನೀಡಿದ್ದರು. ಯಕ್ಷಗಾನ ಮುಗಿದ ಬಳಿಕ ಇತರರ ಸಹಾಯದಿಂದ ಸಚಿವ ಸುಧಾಕರ್ ಕಲಾವಿದರ ಪೋಷಾಕು ಧರಿಸಿದರು. ಅಲ್ಲದೇ ಆ ಪೋಷಾಕಿನಲ್ಲಿಯೇ ಸನ್ಮಾನ ಸ್ವೀಕರಿಸಿದರು. 

ಯಕ್ಷಗಾನದ ವೇದಿಕೆಯಲ್ಲಿ ಬಡಗುತಿಟ್ಟು ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.‌ಸುಧಾಕರ್ ಅವರು ನಂತರ ಇಂದು ಇಂದು ಬೆಳಗ್ಗೆ ಮಂಗಳೂರು ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more