ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

Published : Oct 12, 2022, 07:45 PM IST

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.

ಉತ್ತರಕನ್ನಡ(ಕಾರವಾರ): ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.


ನಿನ್ನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ (Karawara) ಹಾಗೂ ಕುಮುಟಾಕ್ಕೆ (Kumta)ಭೇಟಿ ನೀಡಿದ್ದ ಡಾ‌‌. ಸುಧಾಕರ್ (Dr. Sudhakar) ರಾತ್ರಿ ಭಟ್ಕಳದ ಸಮುದಾಯ ಆಸ್ಪತ್ರೆಗೆ (Bhatkala Comunity Hospital) ಭೇಟಿ ನೀಡಿದ್ದರು. ಅಲ್ಲಿಂದ ತೆರಳಿದ ಸಚಿವ ಡಾ.‌ಸುಧಾಕರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ (Sunil Naik) ಅವರ ಮನೆಯಲ್ಲಿ ತಂಗಿದ್ದರು. ಆರೋಗ್ಯ ಸಚಿವರಿಗೆ (Health Minister) ಭರ್ಜರಿ ಸ್ವಾಗತ ನೀಡಿದ್ದ ಸುನೀಲ್ ನಾಯ್ಕ್, ರಾತ್ರಿ ಮನೆಯಲ್ಲಿ ಬಡಗುತಿಟ್ಟು ಯಕ್ಷಗಾನ (Badagutittu Yakshagana)ಆಯೋಜಿಸಿದ್ದರು. 

ಭಟ್ಕಳದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರೂ ಯಕ್ಷಗಾನ ಮುಗಿಯುವರೆಗೆ ಕುಳಿತು ನೋಡಿದ್ದ ಆರೋಗ್ಯ ಸಚಿವರು ಯಕ್ಷಗಾನ ಕಲೆಗೆ ಮರು ಹೋಗಿದ್ದಾರೆ. ಆರೋಗ್ಯ ಸಚಿವರಿಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕ್ ಸಾಥ್‌ ನೀಡಿದ್ದರು. ಯಕ್ಷಗಾನ ಮುಗಿದ ಬಳಿಕ ಇತರರ ಸಹಾಯದಿಂದ ಸಚಿವ ಸುಧಾಕರ್ ಕಲಾವಿದರ ಪೋಷಾಕು ಧರಿಸಿದರು. ಅಲ್ಲದೇ ಆ ಪೋಷಾಕಿನಲ್ಲಿಯೇ ಸನ್ಮಾನ ಸ್ವೀಕರಿಸಿದರು. 

ಯಕ್ಷಗಾನದ ವೇದಿಕೆಯಲ್ಲಿ ಬಡಗುತಿಟ್ಟು ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.‌ಸುಧಾಕರ್ ಅವರು ನಂತರ ಇಂದು ಇಂದು ಬೆಳಗ್ಗೆ ಮಂಗಳೂರು ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more