ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

ಯಕ್ಷಗಾನ ಕಲೆಗೆ ಮೋಹಿತರಾಗಿ ವೇಷ ಧರಿಸಿದ ಆರೋಗ್ಯ ಸಚಿವ ಸುಧಾಕರ್

Published : Oct 12, 2022, 07:45 PM IST

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.

ಉತ್ತರಕನ್ನಡ(ಕಾರವಾರ): ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಯಕ್ಷಗಾನ ಕಲೆಗೆ ಮಾರು ಹೋಗಿ  ಕಲೆಯ ಕಲಾಕಾರರು ಧರಿಸುವ ವೇಷ ಧರಿಸಿ ಮಿಂಚಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆಯಿತು. ಬಡಗುತಿಟ್ಟು ಯಕ್ಷಗಾನದ ಪೋಷಾಕು ಧರಿಸಿ  ಸಚಿವ ಡಾ. ಸುಧಾಕರ್ ಸನ್ಮಾನ ಸ್ವೀಕರಿಸಿದರು.


ನಿನ್ನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಕಾರವಾರ (Karawara) ಹಾಗೂ ಕುಮುಟಾಕ್ಕೆ (Kumta)ಭೇಟಿ ನೀಡಿದ್ದ ಡಾ‌‌. ಸುಧಾಕರ್ (Dr. Sudhakar) ರಾತ್ರಿ ಭಟ್ಕಳದ ಸಮುದಾಯ ಆಸ್ಪತ್ರೆಗೆ (Bhatkala Comunity Hospital) ಭೇಟಿ ನೀಡಿದ್ದರು. ಅಲ್ಲಿಂದ ತೆರಳಿದ ಸಚಿವ ಡಾ.‌ಸುಧಾಕರ್, ಭಟ್ಕಳ ಶಾಸಕ ಸುನೀಲ್ ನಾಯ್ಕ್ (Sunil Naik) ಅವರ ಮನೆಯಲ್ಲಿ ತಂಗಿದ್ದರು. ಆರೋಗ್ಯ ಸಚಿವರಿಗೆ (Health Minister) ಭರ್ಜರಿ ಸ್ವಾಗತ ನೀಡಿದ್ದ ಸುನೀಲ್ ನಾಯ್ಕ್, ರಾತ್ರಿ ಮನೆಯಲ್ಲಿ ಬಡಗುತಿಟ್ಟು ಯಕ್ಷಗಾನ (Badagutittu Yakshagana)ಆಯೋಜಿಸಿದ್ದರು. 

ಭಟ್ಕಳದಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದರೂ ಯಕ್ಷಗಾನ ಮುಗಿಯುವರೆಗೆ ಕುಳಿತು ನೋಡಿದ್ದ ಆರೋಗ್ಯ ಸಚಿವರು ಯಕ್ಷಗಾನ ಕಲೆಗೆ ಮರು ಹೋಗಿದ್ದಾರೆ. ಆರೋಗ್ಯ ಸಚಿವರಿಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕ್ ಸಾಥ್‌ ನೀಡಿದ್ದರು. ಯಕ್ಷಗಾನ ಮುಗಿದ ಬಳಿಕ ಇತರರ ಸಹಾಯದಿಂದ ಸಚಿವ ಸುಧಾಕರ್ ಕಲಾವಿದರ ಪೋಷಾಕು ಧರಿಸಿದರು. ಅಲ್ಲದೇ ಆ ಪೋಷಾಕಿನಲ್ಲಿಯೇ ಸನ್ಮಾನ ಸ್ವೀಕರಿಸಿದರು. 

ಯಕ್ಷಗಾನದ ವೇದಿಕೆಯಲ್ಲಿ ಬಡಗುತಿಟ್ಟು ಪೋಷಾಕು ಧರಿಸಿ ಮಿಂಚಿದ ಆರೋಗ್ಯ ಸಚಿವ ಡಾ.‌ಸುಧಾಕರ್ ಅವರು ನಂತರ ಇಂದು ಇಂದು ಬೆಳಗ್ಗೆ ಮಂಗಳೂರು ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more