Karwar: ಆಟವಾಡೋವಾಗ ಸ್ಲೈಡಿಂಗ್‌ ಗೇಟ್‌ ತಲೆಯ ಮೇಲೆ ಬಿದ್ದು ಕಂದಮ್ಮ ಸಾವು!

Karwar: ಆಟವಾಡೋವಾಗ ಸ್ಲೈಡಿಂಗ್‌ ಗೇಟ್‌ ತಲೆಯ ಮೇಲೆ ಬಿದ್ದು ಕಂದಮ್ಮ ಸಾವು!

Published : Dec 05, 2024, 09:30 PM IST

ಕಾರವಾರ ತಾಲೂಕಿನಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ತಲೆಯ ಮೇಲೆ ಸ್ಲೈಡಿಂಗ್ ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಈ ಘಟನೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರವಾರ (ಡಿ.5): ಮಕ್ಕಳು ಆಟವಾಡೋವಾಗ ಎಷ್ಟು ಎಚ್ಚರಿಕೆಯಿದ್ದರೂ ಸಾಲದು ಅನ್ನೋದಕ್ಕೆ ಉದಾಹರಣೆ ಇದು. ಕಾರವಾರ ತಾಲೂಕಿನ ಬಬ್ರುವಾಡ  ಗ್ರಾ.ಪಂ. ವ್ಯಾಪ್ತಿಯ ಕನಸಿಗದ್ದೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕನ ತಲೆಯ ಮೇಲೆ ಸ್ಲೈಂಡಿಂಗ್‌ ಗೇಟ್‌ ಬಿದ್ದ ದಾರುಣ ಸಾವು ಕಂಡಿದ್ದಾನೆ.

ಆಜಮ್ ಜಾವೇದ್ ಶೇಕ್ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂದಿನ ಗೇಟ್ ಮುರಿದು ಮಗು ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಮಗುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಗುವಿನ ತಲೆಯ ಭಾಗಕ್ಕೆ ಹೆಚ್ಚಿನ ಪೆಟ್ಟು ಬಿದ್ದಿರುವುದರಿಂದ ಬೇರೆ ಆಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದ್ದರು.

Bengaluru: 2160 ಕೋಟಿಗೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪಾಲು ಖರೀದಿಸಿದ ಕೆನಡಾ ಕೋಟ್ಯಧಿಪತಿ!

ಮಣಿಪಾಲದ ಆಸ್ಪತ್ರೆಗೆ ತೆರಳುತ್ತಿರುವ ಸಂದರ್ಭ ಮಾರ್ಗ ಮಧ್ಯೆ ಹೊನ್ನಾವರದಲ್ಲಿ ಮಗು ಸಾವು ಕಂಡಿದೆ. ಬಾಲಕನಿಗೆ ಎರಡು ಹಿರಿಯ ಸಹೋದರಿಯರಿದ್ದು, ಈತನೇ  ಚಿಕ್ಕವನಾಗಿದ್ದ. ತಂದೆ ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧಿಸಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ