Jan 14, 2020, 4:53 PM IST
ಕಾರವಾರ(ಜ.14) ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.