KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

Published : Sep 02, 2023, 11:02 AM IST

ದೇವರು ವರ ಕೊಟ್ರೂ ಪೂಜಾರಿ ಕೊಡಲ್ಲ ಅಂದಹಾಗೆ ಅಧಿಕಾರಿಗಳ ಕಳ್ಳಾಟ ಮುಂದುವರೆದಿದೆ. ಕೆಬಿಜೆಎನ್ಎಲ್ ಎಂಡಿ ಮೊಂಡುತನದಿಂದ ವಿಜಯಪುರದ ಅನ್ನದಾತರು ನಿತ್ಯ ಪರಿತಪರಿಸುವಂತಾಗಿದೆ.

ವಿಜಯಪುರದ ರೈತರ ಜೀವನಾಡಿ ಆಲಮಟ್ಟಿ ಡ್ಯಾಂ. ಈ ಡ್ಯಾಂ ನಿರ್ಮಾಣಕ್ಕೆ ರೈತರು ತಮ್ಮ ಮನೆ-ಮಠ ಜಮೀನುಗಳನ್ನು ಬಿಟ್ಟುಕೊಟ್ಟಿದ್ರು.. ಡ್ಯಾಂ ನಿರ್ಮಾಣದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಸ್ಥಾಪನೆಯಾಯ್ತು.. ಆದರೆ ಕೆಬಿಜೆಎನ್ಎಲ್(KBJNEL) ಕಚೇರಿ ಮಾತ್ರ ಬೆಂಗಳೂರಿನಲ್ಲೇ ಬೇರೂರಿದೆ.. ರೈತರ(Farmer) ಅಲೆದಾಟ ಮುಂದುವರೆದಿದೆ. ಆಡಳಿತಾತ್ಮಕ ದೃಷ್ಟಿಯಿಂದ ಹಿಂದಿನ ಸರ್ಕಾರ, ಕೆಬಿಜೆಎನೆಲ್ ಕಚೇರಿಯನ್ನು ಆಲಮಟ್ಟಿ ಡ್ಯಾಂಗೆ(Alamatta Dam) ಸ್ಥಳಾಂತರಿಸಲು ಆದೇಶಿಸಿತ್ತು. ಆದರೆ ಬೆಂಗಳೂರಿನಲ್ಲಿ(Bengaluru) ಕಾರ್ಯ ನಿರ್ವಹಿಸುತ್ತಿರುವ ಎಂಡಿ ಮಾತ್ರ ಬೆಂಗಳೂರು ಬಿಟ್ಟು ಕದಲುತ್ತಿಲ್ಲ. ಇನ್ನು ರೈತರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ರು. ಹೀಗಾಗಿ ಜಲ ಸಂಪನ್ಮೂಲ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ  ಎಚ್.ಎಂ ಮಂಜುನಾಥ್, 2022 ರಂದು ಬೆಂಗಳೂರಿನ KBJNL ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಸ್ಥಳಾಂತರ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ರು. ಅಂದು ತುರ್ತು ನೊಟೀಸ್ ನೀಡಿದ್ದರೂ ಸಹ ಎಂಡಿ ಆಲಮಟ್ಟಿಯತ್ತ ತಲೆ ಹಾಕಿಲ್ಲ. ಕೆಬಿಜೆಎನ್ಎಲ್ ಕಚೇರಿಯ ಕೆಲಸ ಕಾರ್ಯಗಳಿಗೆ ವಿಜಯಪುರದಿಂದ ರೈತರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಬೆಂಗಳೂರು ಬಿಟ್ಟು ಬರದ ಅಧಿಕಾರಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದು, ವಿಧಾನಸಭೆ ಅಧಿವೇಶನ ವೇಳೆ ಈ ವಿಚಾರ ಪ್ರಸ್ತಾಪಿಸೋದಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more