KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

Published : Sep 02, 2023, 11:02 AM IST

ದೇವರು ವರ ಕೊಟ್ರೂ ಪೂಜಾರಿ ಕೊಡಲ್ಲ ಅಂದಹಾಗೆ ಅಧಿಕಾರಿಗಳ ಕಳ್ಳಾಟ ಮುಂದುವರೆದಿದೆ. ಕೆಬಿಜೆಎನ್ಎಲ್ ಎಂಡಿ ಮೊಂಡುತನದಿಂದ ವಿಜಯಪುರದ ಅನ್ನದಾತರು ನಿತ್ಯ ಪರಿತಪರಿಸುವಂತಾಗಿದೆ.

ವಿಜಯಪುರದ ರೈತರ ಜೀವನಾಡಿ ಆಲಮಟ್ಟಿ ಡ್ಯಾಂ. ಈ ಡ್ಯಾಂ ನಿರ್ಮಾಣಕ್ಕೆ ರೈತರು ತಮ್ಮ ಮನೆ-ಮಠ ಜಮೀನುಗಳನ್ನು ಬಿಟ್ಟುಕೊಟ್ಟಿದ್ರು.. ಡ್ಯಾಂ ನಿರ್ಮಾಣದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಸ್ಥಾಪನೆಯಾಯ್ತು.. ಆದರೆ ಕೆಬಿಜೆಎನ್ಎಲ್(KBJNEL) ಕಚೇರಿ ಮಾತ್ರ ಬೆಂಗಳೂರಿನಲ್ಲೇ ಬೇರೂರಿದೆ.. ರೈತರ(Farmer) ಅಲೆದಾಟ ಮುಂದುವರೆದಿದೆ. ಆಡಳಿತಾತ್ಮಕ ದೃಷ್ಟಿಯಿಂದ ಹಿಂದಿನ ಸರ್ಕಾರ, ಕೆಬಿಜೆಎನೆಲ್ ಕಚೇರಿಯನ್ನು ಆಲಮಟ್ಟಿ ಡ್ಯಾಂಗೆ(Alamatta Dam) ಸ್ಥಳಾಂತರಿಸಲು ಆದೇಶಿಸಿತ್ತು. ಆದರೆ ಬೆಂಗಳೂರಿನಲ್ಲಿ(Bengaluru) ಕಾರ್ಯ ನಿರ್ವಹಿಸುತ್ತಿರುವ ಎಂಡಿ ಮಾತ್ರ ಬೆಂಗಳೂರು ಬಿಟ್ಟು ಕದಲುತ್ತಿಲ್ಲ. ಇನ್ನು ರೈತರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ರು. ಹೀಗಾಗಿ ಜಲ ಸಂಪನ್ಮೂಲ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ  ಎಚ್.ಎಂ ಮಂಜುನಾಥ್, 2022 ರಂದು ಬೆಂಗಳೂರಿನ KBJNL ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಸ್ಥಳಾಂತರ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ರು. ಅಂದು ತುರ್ತು ನೊಟೀಸ್ ನೀಡಿದ್ದರೂ ಸಹ ಎಂಡಿ ಆಲಮಟ್ಟಿಯತ್ತ ತಲೆ ಹಾಕಿಲ್ಲ. ಕೆಬಿಜೆಎನ್ಎಲ್ ಕಚೇರಿಯ ಕೆಲಸ ಕಾರ್ಯಗಳಿಗೆ ವಿಜಯಪುರದಿಂದ ರೈತರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಬೆಂಗಳೂರು ಬಿಟ್ಟು ಬರದ ಅಧಿಕಾರಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದು, ವಿಧಾನಸಭೆ ಅಧಿವೇಶನ ವೇಳೆ ಈ ವಿಚಾರ ಪ್ರಸ್ತಾಪಿಸೋದಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more