KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

KBJNL ಶಿಫ್ಟ್‌ಗೆ ಆದೇಶವಿದ್ರೂ ಎಂಡಿ ಕಳ್ಳಾಟ: ಬೆಂಗಳೂರಿನ ಕಚೇರಿಗೆ ವಿಜಯಪುರ ರೈತರ ಅಲೆದಾಟ

Published : Sep 02, 2023, 11:02 AM IST

ದೇವರು ವರ ಕೊಟ್ರೂ ಪೂಜಾರಿ ಕೊಡಲ್ಲ ಅಂದಹಾಗೆ ಅಧಿಕಾರಿಗಳ ಕಳ್ಳಾಟ ಮುಂದುವರೆದಿದೆ. ಕೆಬಿಜೆಎನ್ಎಲ್ ಎಂಡಿ ಮೊಂಡುತನದಿಂದ ವಿಜಯಪುರದ ಅನ್ನದಾತರು ನಿತ್ಯ ಪರಿತಪರಿಸುವಂತಾಗಿದೆ.

ವಿಜಯಪುರದ ರೈತರ ಜೀವನಾಡಿ ಆಲಮಟ್ಟಿ ಡ್ಯಾಂ. ಈ ಡ್ಯಾಂ ನಿರ್ಮಾಣಕ್ಕೆ ರೈತರು ತಮ್ಮ ಮನೆ-ಮಠ ಜಮೀನುಗಳನ್ನು ಬಿಟ್ಟುಕೊಟ್ಟಿದ್ರು.. ಡ್ಯಾಂ ನಿರ್ಮಾಣದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಸ್ಥಾಪನೆಯಾಯ್ತು.. ಆದರೆ ಕೆಬಿಜೆಎನ್ಎಲ್(KBJNEL) ಕಚೇರಿ ಮಾತ್ರ ಬೆಂಗಳೂರಿನಲ್ಲೇ ಬೇರೂರಿದೆ.. ರೈತರ(Farmer) ಅಲೆದಾಟ ಮುಂದುವರೆದಿದೆ. ಆಡಳಿತಾತ್ಮಕ ದೃಷ್ಟಿಯಿಂದ ಹಿಂದಿನ ಸರ್ಕಾರ, ಕೆಬಿಜೆಎನೆಲ್ ಕಚೇರಿಯನ್ನು ಆಲಮಟ್ಟಿ ಡ್ಯಾಂಗೆ(Alamatta Dam) ಸ್ಥಳಾಂತರಿಸಲು ಆದೇಶಿಸಿತ್ತು. ಆದರೆ ಬೆಂಗಳೂರಿನಲ್ಲಿ(Bengaluru) ಕಾರ್ಯ ನಿರ್ವಹಿಸುತ್ತಿರುವ ಎಂಡಿ ಮಾತ್ರ ಬೆಂಗಳೂರು ಬಿಟ್ಟು ಕದಲುತ್ತಿಲ್ಲ. ಇನ್ನು ರೈತರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ರು. ಹೀಗಾಗಿ ಜಲ ಸಂಪನ್ಮೂಲ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ  ಎಚ್.ಎಂ ಮಂಜುನಾಥ್, 2022 ರಂದು ಬೆಂಗಳೂರಿನ KBJNL ಕಚೇರಿಗಳನ್ನು ಸಿಬ್ಬಂದಿ ಸಮೇತವಾಗಿ ಸ್ಥಳಾಂತರ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ರು. ಅಂದು ತುರ್ತು ನೊಟೀಸ್ ನೀಡಿದ್ದರೂ ಸಹ ಎಂಡಿ ಆಲಮಟ್ಟಿಯತ್ತ ತಲೆ ಹಾಕಿಲ್ಲ. ಕೆಬಿಜೆಎನ್ಎಲ್ ಕಚೇರಿಯ ಕೆಲಸ ಕಾರ್ಯಗಳಿಗೆ ವಿಜಯಪುರದಿಂದ ರೈತರು ಬೆಂಗಳೂರಿಗೆ ಅಲೆದಾಡುವಂತಾಗಿದೆ. ಬೆಂಗಳೂರು ಬಿಟ್ಟು ಬರದ ಅಧಿಕಾರಿಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದು, ವಿಧಾನಸಭೆ ಅಧಿವೇಶನ ವೇಳೆ ಈ ವಿಚಾರ ಪ್ರಸ್ತಾಪಿಸೋದಾಗಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾವೇರಿಯಲ್ಲಿ ಬರದ ಪರಿಸ್ಥಿತಿ: ಹನಿ ನೀರಿಗೂ ಸಂಕಷ್ಟ..ಬೆಳೆದ ಬೆಳೆಯೂ ನಾಶ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more