31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

Published : Oct 28, 2023, 10:43 AM IST

ಆ ಇಲಾಖೆ ಸರಿಯಾಗಿ ತನ್ನ ಕೆಲಸವನ್ನ 30 ವರ್ಷಗಳ ಹಿಂದೆ ಮಾಡಿದ್ದರೆ ಪಾಪ ಈ ಕುಟುಂಬ ಇವತ್ತು ಬೀದಿಗೆ ಬೀಳುವ ಪರಿಸ್ಥಿತಿ ಬರತಿರಲಿಲ್ಲ. ಆದ್ರೆ, ಮೂರು ದಶಕಗಳ ಕಾಲ ಕಣ್ಮುಚ್ಚಿಕುಳಿತಿದ್ದ ಅಧಿಕಾರಿಗಳು ಈಗ ಏಕಾಏಕಿ ಜೆಸಿಬಿ ನುಗ್ಗಿಸಿ, ಬಡ ಕುಟುಂಬಗಳನ್ನು ಬೀದಿ ಪಾಲು ಮಾಡಿದ್ದಾರೆ.
 

ಮನೆ ಮುಂದೆ ಜೆಸಿಬಿಗಳ ಘರ್ಜನೆ. ಕಷ್ಟಪಟ್ಟು ಕಟ್ಟಿಕೊಂಡಿದ್ದ ಮನೆಗಳು(Houses) ನೆಲಸಮ. ದಿಕ್ಕು ತೋಚದೆ ಕಂಗಾಲಾದ ಕುಟುಂಬ. ಈ ದೃಶ್ಯ ಕಂಡುಬಂದಿದ್ದು ಧಾರವಾಡದ(Dharwad) ಮುಮ್ಮಿಗಟ್ಟಿ ಗ್ರಾಮದಲ್ಲಿ. 31 ವರ್ಷಗಳ ಹಿಂದೆ ಕೆಐಎಡಿಬಿ ಇಲಾಖೆ ಮುಮ್ಮಿಗಟ್ಟಿ ಗ್ರಾಮದ ರೈತ ರಾಮಸಿಂಗ್ ಎಂಬುವರ 16 ಎಕರೆ 38 ಗುಂಟೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿತ್ತು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿವೇಶನಗಳಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಕೆಐಎಡಿಬಿ(KIADB) ಭೂಸ್ವಾಧೀನ ಮಾಡಿಕೊಂಡ 7 ವರ್ಷದೊಳಗೆ ಕಾಮಗಾರಿ ಕೈಗೆತ್ತಿಕೊಳ್ಬೇಕು ಅನ್ನೋ ಆದೇಶವಿದೆ. ಆದರೆ 3 ದಶಕಗಳು ಕಳೆದರೂ ಯಾವುದೇ ಡೆವೆಲಪ್ ಮಾಡಿಲ್ಲ. ಹೀಗಾಗಿ ನಮ್ಮ ಜಮೀನು ನಮಗೆ ಬೇಕು ಎಂದು ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್‌ಗೆ(Farmers) ರಿಟ್ ಅರ್ಜಿ ಹಾಕಿದ್ದಾರೆ. ಆದ್ರೆ ಈಗ ಏಕಾಏಕಿ ಯಾವುದೇ ನೋಟಿಸ್ ಕೂಡ ನೀಡದೇ ಕೆಐಎಡಿಬಿ ಅಧಿಕಾರಿಗಳು ಜೆಸಿಬಿ ನುಗ್ಗಿಸಿ ಮನೆಗಳನ್ನ ನೆಲಸಮ ಮಾಡಿದ್ದಾರೆ. ನಮ್ಮ ಜಮೀನು ನಮಗೆ ಬೇಕು ಎಂದು ರೈತರು ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ.. ಕೇಸ್ ಕೋರ್ಟ್‌ನಲ್ಲಿ ಇದ್ದರೂ ಈಗ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ಜೆಸಿಬಿ ನುಗ್ಗಿಸಿ ಎರಡು ಮನೆಗಳನ್ನು ನೆಲಸಮ ಮಾಡಿದ್ದಾರೆ.. ಇದರಲ್ಲಿ ಒಂದು ಅಂಗವಿಕಲನ ಕುಟುಂಬ. ಎರಡು ಮನೆ ನೆಲಸಮ ಮಾಡಿದ ಅಧಿಕಾರಿಗಳು ಇನ್ನೊಂದು ಮನೆ ತೆರವಿಗೂ  ಗಡುವು ಕೊಟ್ಟಿದ್ದಾರಂತೆ. ಇಷ್ಟು ವರ್ಷ ಸುಮ್ಮನಿದ್ದ ಅಧಿಕಾರಿಗಳು ಈಗ ಏಕಾಏಕಿ ಮನೆ ತೆರವು ಮಾಡ್ತಿದ್ದಾರೆ.. ಇದರ ಹಿಂದೆ ಕೆಲ ರಾಜಕಾರಣಿಗಳ ಷಡ್ಯಂತ್ರವಿದೆ ಅನ್ನೋದು ನೊಂದ ಕುಟುಂಬಗಳ ಆರೋಪ. ಕೆಐಎಡಿಬಿ ಅಧಿಕಾರಿಗಳು ನಮ್ಮ ಜಮೀನನ್ನು ವಶಪಡಿಸಿಕೊಂಡು ರಾಜಕೀಯ ಮುಖಂಡರುಗಳಿಗೆ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಕೊಡಲು ಪ್ಲಾನ್ ಮಾಡಿದ್ದಾರೆ. ಆದ್ರೆ, ನಮ್ಮ ಜಮೀನು ನಮಗೆ ಬೇಕು, ನಾವು ಜಮೀನು ಬಿಟ್ಟುಕೊಡಲ್ಲ ಎಂದು ರೈತ ಕುಟುಂಬಗಳು ಕಣ್ಣೀರಿಡುತ್ತಿವೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ರಕ್ತ ಚರಿತ್ರೆಗೆ ರೆಡಿ ನೆಲ್ಸನ್! ಈ ಸಿನಿಮಾ ಕಥೆಯ ಹೀರೋ ಯಾರು ?

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more