31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

Published : Oct 28, 2023, 10:43 AM IST

ಆ ಇಲಾಖೆ ಸರಿಯಾಗಿ ತನ್ನ ಕೆಲಸವನ್ನ 30 ವರ್ಷಗಳ ಹಿಂದೆ ಮಾಡಿದ್ದರೆ ಪಾಪ ಈ ಕುಟುಂಬ ಇವತ್ತು ಬೀದಿಗೆ ಬೀಳುವ ಪರಿಸ್ಥಿತಿ ಬರತಿರಲಿಲ್ಲ. ಆದ್ರೆ, ಮೂರು ದಶಕಗಳ ಕಾಲ ಕಣ್ಮುಚ್ಚಿಕುಳಿತಿದ್ದ ಅಧಿಕಾರಿಗಳು ಈಗ ಏಕಾಏಕಿ ಜೆಸಿಬಿ ನುಗ್ಗಿಸಿ, ಬಡ ಕುಟುಂಬಗಳನ್ನು ಬೀದಿ ಪಾಲು ಮಾಡಿದ್ದಾರೆ.
 

ಮನೆ ಮುಂದೆ ಜೆಸಿಬಿಗಳ ಘರ್ಜನೆ. ಕಷ್ಟಪಟ್ಟು ಕಟ್ಟಿಕೊಂಡಿದ್ದ ಮನೆಗಳು(Houses) ನೆಲಸಮ. ದಿಕ್ಕು ತೋಚದೆ ಕಂಗಾಲಾದ ಕುಟುಂಬ. ಈ ದೃಶ್ಯ ಕಂಡುಬಂದಿದ್ದು ಧಾರವಾಡದ(Dharwad) ಮುಮ್ಮಿಗಟ್ಟಿ ಗ್ರಾಮದಲ್ಲಿ. 31 ವರ್ಷಗಳ ಹಿಂದೆ ಕೆಐಎಡಿಬಿ ಇಲಾಖೆ ಮುಮ್ಮಿಗಟ್ಟಿ ಗ್ರಾಮದ ರೈತ ರಾಮಸಿಂಗ್ ಎಂಬುವರ 16 ಎಕರೆ 38 ಗುಂಟೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿತ್ತು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿವೇಶನಗಳಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಕೆಐಎಡಿಬಿ(KIADB) ಭೂಸ್ವಾಧೀನ ಮಾಡಿಕೊಂಡ 7 ವರ್ಷದೊಳಗೆ ಕಾಮಗಾರಿ ಕೈಗೆತ್ತಿಕೊಳ್ಬೇಕು ಅನ್ನೋ ಆದೇಶವಿದೆ. ಆದರೆ 3 ದಶಕಗಳು ಕಳೆದರೂ ಯಾವುದೇ ಡೆವೆಲಪ್ ಮಾಡಿಲ್ಲ. ಹೀಗಾಗಿ ನಮ್ಮ ಜಮೀನು ನಮಗೆ ಬೇಕು ಎಂದು ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್‌ಗೆ(Farmers) ರಿಟ್ ಅರ್ಜಿ ಹಾಕಿದ್ದಾರೆ. ಆದ್ರೆ ಈಗ ಏಕಾಏಕಿ ಯಾವುದೇ ನೋಟಿಸ್ ಕೂಡ ನೀಡದೇ ಕೆಐಎಡಿಬಿ ಅಧಿಕಾರಿಗಳು ಜೆಸಿಬಿ ನುಗ್ಗಿಸಿ ಮನೆಗಳನ್ನ ನೆಲಸಮ ಮಾಡಿದ್ದಾರೆ. ನಮ್ಮ ಜಮೀನು ನಮಗೆ ಬೇಕು ಎಂದು ರೈತರು ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ.. ಕೇಸ್ ಕೋರ್ಟ್‌ನಲ್ಲಿ ಇದ್ದರೂ ಈಗ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ಜೆಸಿಬಿ ನುಗ್ಗಿಸಿ ಎರಡು ಮನೆಗಳನ್ನು ನೆಲಸಮ ಮಾಡಿದ್ದಾರೆ.. ಇದರಲ್ಲಿ ಒಂದು ಅಂಗವಿಕಲನ ಕುಟುಂಬ. ಎರಡು ಮನೆ ನೆಲಸಮ ಮಾಡಿದ ಅಧಿಕಾರಿಗಳು ಇನ್ನೊಂದು ಮನೆ ತೆರವಿಗೂ  ಗಡುವು ಕೊಟ್ಟಿದ್ದಾರಂತೆ. ಇಷ್ಟು ವರ್ಷ ಸುಮ್ಮನಿದ್ದ ಅಧಿಕಾರಿಗಳು ಈಗ ಏಕಾಏಕಿ ಮನೆ ತೆರವು ಮಾಡ್ತಿದ್ದಾರೆ.. ಇದರ ಹಿಂದೆ ಕೆಲ ರಾಜಕಾರಣಿಗಳ ಷಡ್ಯಂತ್ರವಿದೆ ಅನ್ನೋದು ನೊಂದ ಕುಟುಂಬಗಳ ಆರೋಪ. ಕೆಐಎಡಿಬಿ ಅಧಿಕಾರಿಗಳು ನಮ್ಮ ಜಮೀನನ್ನು ವಶಪಡಿಸಿಕೊಂಡು ರಾಜಕೀಯ ಮುಖಂಡರುಗಳಿಗೆ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಕೊಡಲು ಪ್ಲಾನ್ ಮಾಡಿದ್ದಾರೆ. ಆದ್ರೆ, ನಮ್ಮ ಜಮೀನು ನಮಗೆ ಬೇಕು, ನಾವು ಜಮೀನು ಬಿಟ್ಟುಕೊಡಲ್ಲ ಎಂದು ರೈತ ಕುಟುಂಬಗಳು ಕಣ್ಣೀರಿಡುತ್ತಿವೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ರಕ್ತ ಚರಿತ್ರೆಗೆ ರೆಡಿ ನೆಲ್ಸನ್! ಈ ಸಿನಿಮಾ ಕಥೆಯ ಹೀರೋ ಯಾರು ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more