31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

Published : Oct 28, 2023, 10:43 AM IST

ಆ ಇಲಾಖೆ ಸರಿಯಾಗಿ ತನ್ನ ಕೆಲಸವನ್ನ 30 ವರ್ಷಗಳ ಹಿಂದೆ ಮಾಡಿದ್ದರೆ ಪಾಪ ಈ ಕುಟುಂಬ ಇವತ್ತು ಬೀದಿಗೆ ಬೀಳುವ ಪರಿಸ್ಥಿತಿ ಬರತಿರಲಿಲ್ಲ. ಆದ್ರೆ, ಮೂರು ದಶಕಗಳ ಕಾಲ ಕಣ್ಮುಚ್ಚಿಕುಳಿತಿದ್ದ ಅಧಿಕಾರಿಗಳು ಈಗ ಏಕಾಏಕಿ ಜೆಸಿಬಿ ನುಗ್ಗಿಸಿ, ಬಡ ಕುಟುಂಬಗಳನ್ನು ಬೀದಿ ಪಾಲು ಮಾಡಿದ್ದಾರೆ.
 

ಮನೆ ಮುಂದೆ ಜೆಸಿಬಿಗಳ ಘರ್ಜನೆ. ಕಷ್ಟಪಟ್ಟು ಕಟ್ಟಿಕೊಂಡಿದ್ದ ಮನೆಗಳು(Houses) ನೆಲಸಮ. ದಿಕ್ಕು ತೋಚದೆ ಕಂಗಾಲಾದ ಕುಟುಂಬ. ಈ ದೃಶ್ಯ ಕಂಡುಬಂದಿದ್ದು ಧಾರವಾಡದ(Dharwad) ಮುಮ್ಮಿಗಟ್ಟಿ ಗ್ರಾಮದಲ್ಲಿ. 31 ವರ್ಷಗಳ ಹಿಂದೆ ಕೆಐಎಡಿಬಿ ಇಲಾಖೆ ಮುಮ್ಮಿಗಟ್ಟಿ ಗ್ರಾಮದ ರೈತ ರಾಮಸಿಂಗ್ ಎಂಬುವರ 16 ಎಕರೆ 38 ಗುಂಟೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿತ್ತು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿವೇಶನಗಳಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಕೆಐಎಡಿಬಿ(KIADB) ಭೂಸ್ವಾಧೀನ ಮಾಡಿಕೊಂಡ 7 ವರ್ಷದೊಳಗೆ ಕಾಮಗಾರಿ ಕೈಗೆತ್ತಿಕೊಳ್ಬೇಕು ಅನ್ನೋ ಆದೇಶವಿದೆ. ಆದರೆ 3 ದಶಕಗಳು ಕಳೆದರೂ ಯಾವುದೇ ಡೆವೆಲಪ್ ಮಾಡಿಲ್ಲ. ಹೀಗಾಗಿ ನಮ್ಮ ಜಮೀನು ನಮಗೆ ಬೇಕು ಎಂದು ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್‌ಗೆ(Farmers) ರಿಟ್ ಅರ್ಜಿ ಹಾಕಿದ್ದಾರೆ. ಆದ್ರೆ ಈಗ ಏಕಾಏಕಿ ಯಾವುದೇ ನೋಟಿಸ್ ಕೂಡ ನೀಡದೇ ಕೆಐಎಡಿಬಿ ಅಧಿಕಾರಿಗಳು ಜೆಸಿಬಿ ನುಗ್ಗಿಸಿ ಮನೆಗಳನ್ನ ನೆಲಸಮ ಮಾಡಿದ್ದಾರೆ. ನಮ್ಮ ಜಮೀನು ನಮಗೆ ಬೇಕು ಎಂದು ರೈತರು ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ.. ಕೇಸ್ ಕೋರ್ಟ್‌ನಲ್ಲಿ ಇದ್ದರೂ ಈಗ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ಜೆಸಿಬಿ ನುಗ್ಗಿಸಿ ಎರಡು ಮನೆಗಳನ್ನು ನೆಲಸಮ ಮಾಡಿದ್ದಾರೆ.. ಇದರಲ್ಲಿ ಒಂದು ಅಂಗವಿಕಲನ ಕುಟುಂಬ. ಎರಡು ಮನೆ ನೆಲಸಮ ಮಾಡಿದ ಅಧಿಕಾರಿಗಳು ಇನ್ನೊಂದು ಮನೆ ತೆರವಿಗೂ  ಗಡುವು ಕೊಟ್ಟಿದ್ದಾರಂತೆ. ಇಷ್ಟು ವರ್ಷ ಸುಮ್ಮನಿದ್ದ ಅಧಿಕಾರಿಗಳು ಈಗ ಏಕಾಏಕಿ ಮನೆ ತೆರವು ಮಾಡ್ತಿದ್ದಾರೆ.. ಇದರ ಹಿಂದೆ ಕೆಲ ರಾಜಕಾರಣಿಗಳ ಷಡ್ಯಂತ್ರವಿದೆ ಅನ್ನೋದು ನೊಂದ ಕುಟುಂಬಗಳ ಆರೋಪ. ಕೆಐಎಡಿಬಿ ಅಧಿಕಾರಿಗಳು ನಮ್ಮ ಜಮೀನನ್ನು ವಶಪಡಿಸಿಕೊಂಡು ರಾಜಕೀಯ ಮುಖಂಡರುಗಳಿಗೆ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಕೊಡಲು ಪ್ಲಾನ್ ಮಾಡಿದ್ದಾರೆ. ಆದ್ರೆ, ನಮ್ಮ ಜಮೀನು ನಮಗೆ ಬೇಕು, ನಾವು ಜಮೀನು ಬಿಟ್ಟುಕೊಡಲ್ಲ ಎಂದು ರೈತ ಕುಟುಂಬಗಳು ಕಣ್ಣೀರಿಡುತ್ತಿವೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ರಕ್ತ ಚರಿತ್ರೆಗೆ ರೆಡಿ ನೆಲ್ಸನ್! ಈ ಸಿನಿಮಾ ಕಥೆಯ ಹೀರೋ ಯಾರು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more