31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

31 ವರ್ಷದ ಹಿಂದೆ ರೈತರ ಜಮೀನು ಭೂಸ್ವಾಧೀನ: ಏಕಾಏಕಿ ಬಡವರ ಮನೆ ನೆಲಸಮಗೊಳಿಸಿದ KIADB

Published : Oct 28, 2023, 10:43 AM IST

ಆ ಇಲಾಖೆ ಸರಿಯಾಗಿ ತನ್ನ ಕೆಲಸವನ್ನ 30 ವರ್ಷಗಳ ಹಿಂದೆ ಮಾಡಿದ್ದರೆ ಪಾಪ ಈ ಕುಟುಂಬ ಇವತ್ತು ಬೀದಿಗೆ ಬೀಳುವ ಪರಿಸ್ಥಿತಿ ಬರತಿರಲಿಲ್ಲ. ಆದ್ರೆ, ಮೂರು ದಶಕಗಳ ಕಾಲ ಕಣ್ಮುಚ್ಚಿಕುಳಿತಿದ್ದ ಅಧಿಕಾರಿಗಳು ಈಗ ಏಕಾಏಕಿ ಜೆಸಿಬಿ ನುಗ್ಗಿಸಿ, ಬಡ ಕುಟುಂಬಗಳನ್ನು ಬೀದಿ ಪಾಲು ಮಾಡಿದ್ದಾರೆ.
 

ಮನೆ ಮುಂದೆ ಜೆಸಿಬಿಗಳ ಘರ್ಜನೆ. ಕಷ್ಟಪಟ್ಟು ಕಟ್ಟಿಕೊಂಡಿದ್ದ ಮನೆಗಳು(Houses) ನೆಲಸಮ. ದಿಕ್ಕು ತೋಚದೆ ಕಂಗಾಲಾದ ಕುಟುಂಬ. ಈ ದೃಶ್ಯ ಕಂಡುಬಂದಿದ್ದು ಧಾರವಾಡದ(Dharwad) ಮುಮ್ಮಿಗಟ್ಟಿ ಗ್ರಾಮದಲ್ಲಿ. 31 ವರ್ಷಗಳ ಹಿಂದೆ ಕೆಐಎಡಿಬಿ ಇಲಾಖೆ ಮುಮ್ಮಿಗಟ್ಟಿ ಗ್ರಾಮದ ರೈತ ರಾಮಸಿಂಗ್ ಎಂಬುವರ 16 ಎಕರೆ 38 ಗುಂಟೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿತ್ತು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನಿವೇಶನಗಳಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಕೆಐಎಡಿಬಿ(KIADB) ಭೂಸ್ವಾಧೀನ ಮಾಡಿಕೊಂಡ 7 ವರ್ಷದೊಳಗೆ ಕಾಮಗಾರಿ ಕೈಗೆತ್ತಿಕೊಳ್ಬೇಕು ಅನ್ನೋ ಆದೇಶವಿದೆ. ಆದರೆ 3 ದಶಕಗಳು ಕಳೆದರೂ ಯಾವುದೇ ಡೆವೆಲಪ್ ಮಾಡಿಲ್ಲ. ಹೀಗಾಗಿ ನಮ್ಮ ಜಮೀನು ನಮಗೆ ಬೇಕು ಎಂದು ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್‌ಗೆ(Farmers) ರಿಟ್ ಅರ್ಜಿ ಹಾಕಿದ್ದಾರೆ. ಆದ್ರೆ ಈಗ ಏಕಾಏಕಿ ಯಾವುದೇ ನೋಟಿಸ್ ಕೂಡ ನೀಡದೇ ಕೆಐಎಡಿಬಿ ಅಧಿಕಾರಿಗಳು ಜೆಸಿಬಿ ನುಗ್ಗಿಸಿ ಮನೆಗಳನ್ನ ನೆಲಸಮ ಮಾಡಿದ್ದಾರೆ. ನಮ್ಮ ಜಮೀನು ನಮಗೆ ಬೇಕು ಎಂದು ರೈತರು ಈಗಾಗಲೇ ಕೋರ್ಟ್ ಮೆಟ್ಟಿಲೇರಿದ್ದಾರೆ.. ಕೇಸ್ ಕೋರ್ಟ್‌ನಲ್ಲಿ ಇದ್ದರೂ ಈಗ ಕೆಐಎಡಿಬಿ ಅಧಿಕಾರಿಗಳು ಏಕಾಏಕಿ ಜೆಸಿಬಿ ನುಗ್ಗಿಸಿ ಎರಡು ಮನೆಗಳನ್ನು ನೆಲಸಮ ಮಾಡಿದ್ದಾರೆ.. ಇದರಲ್ಲಿ ಒಂದು ಅಂಗವಿಕಲನ ಕುಟುಂಬ. ಎರಡು ಮನೆ ನೆಲಸಮ ಮಾಡಿದ ಅಧಿಕಾರಿಗಳು ಇನ್ನೊಂದು ಮನೆ ತೆರವಿಗೂ  ಗಡುವು ಕೊಟ್ಟಿದ್ದಾರಂತೆ. ಇಷ್ಟು ವರ್ಷ ಸುಮ್ಮನಿದ್ದ ಅಧಿಕಾರಿಗಳು ಈಗ ಏಕಾಏಕಿ ಮನೆ ತೆರವು ಮಾಡ್ತಿದ್ದಾರೆ.. ಇದರ ಹಿಂದೆ ಕೆಲ ರಾಜಕಾರಣಿಗಳ ಷಡ್ಯಂತ್ರವಿದೆ ಅನ್ನೋದು ನೊಂದ ಕುಟುಂಬಗಳ ಆರೋಪ. ಕೆಐಎಡಿಬಿ ಅಧಿಕಾರಿಗಳು ನಮ್ಮ ಜಮೀನನ್ನು ವಶಪಡಿಸಿಕೊಂಡು ರಾಜಕೀಯ ಮುಖಂಡರುಗಳಿಗೆ ಬಾರ್ ಆ್ಯಂಡ್ ರೆಸ್ಟೊರೆಂಟ್ ತೆರೆಯಲು ಕೊಡಲು ಪ್ಲಾನ್ ಮಾಡಿದ್ದಾರೆ. ಆದ್ರೆ, ನಮ್ಮ ಜಮೀನು ನಮಗೆ ಬೇಕು, ನಾವು ಜಮೀನು ಬಿಟ್ಟುಕೊಡಲ್ಲ ಎಂದು ರೈತ ಕುಟುಂಬಗಳು ಕಣ್ಣೀರಿಡುತ್ತಿವೆ.

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ರಕ್ತ ಚರಿತ್ರೆಗೆ ರೆಡಿ ನೆಲ್ಸನ್! ಈ ಸಿನಿಮಾ ಕಥೆಯ ಹೀರೋ ಯಾರು ?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more