ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

Suvarna News   | Asianet News
Published : Sep 10, 2021, 03:39 PM ISTUpdated : Sep 10, 2021, 04:22 PM IST

ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 
 

ಕೊಡಗು (ಸೆ. 10): ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 

ಈ ಮೀನನ್ನು ಯಾರು ಕೂಡಾ ಹಿಡಿಯೋದಿಲ್ಲ. ಈ ಪುಟ್ಟ ತೊರೆಯ ಪಕ್ಕದಲ್ಲಿ ಭದ್ರಕಾಳಿ ದೇವಾಲಯವಿದ್ದು, ದೇವರಿಗೆ ಸೇರಿದ ಮತ್ಸ್ಯ ರಾಶಿ ಅನ್ನುವ ನಂಬಿಕೆ ಈ ಭಾಗದ ಜನರದ್ದು. ಹೀಗಾಗಿ ಇಂದಿಗೂ ಸಾವಿರಾರು ಮೀನುಗಳು ಈ ಪುಟ್ಟ ತೊರೆಯಲ್ಲಿ ಜೀವಿಸುತ್ತಿವೆ. ಮೀನುಗಳು ಹೆಚ್ಚಿರುವ ಕಾರಣಕ್ಕೆ ಈ ತೊರೆಯನ್ನ ಮೀನುಕೊಲ್ಲಿ ಅಂತ ಕರೆಯಲಾಗುತ್ತದೆ. 

ಈ ಮೀನುಗಳನ್ನ ಹಿಡಿದರೆ ಅವರ ಜೀವನದಲ್ಲಿ ಸಂಕಷ್ಟ ಎದುರಾಗುತ್ತೆ, ಅನಾಹುತ ಸಂಭವಿಸುತ್ತೆ ಅನ್ನುವ ನಂಬಿಕೆ ಬಹಳ ಹಿಂದಿನಿಂದಲೂ ಇದೆ.  ಹೀಗಾಗಿ ಅದರ ಪಾಡಿಗೆ ಬಿಟ್ಟಿದ್ದಾರೆ. ಅವುಗಳನ್ನ ಮುಟ್ಟೋದಕ್ಕೂ ಈ ಭಾಗದ ಜನ ಭಯಪಡ್ತಾರೆ. ನೀರು ಹೆಚ್ಚಾದಾಗ ಹರಿದು ಹೋಗುವ ಮೀನುಗಳು ಬಳಿಕ ನೀರು ಕಡಿಮೆಯಾಗುತ್ತಿದ್ದಂತೆ ಮರಳಿ ಈ ಸ್ಥಳಕ್ಕೆ ಬಂದು ಸೇರುತ್ತವೆ. ಕೊಡಗಿನ ಮೂವತ್ತೊಕ್ಲು ಮೀನುಕೊಲ್ಲಿಯ ಮೀನುಗಳನ್ನ ಉಳಿಸೋದಕ್ಕಾಗಿ ಗ್ರಾಮಸ್ಥರು ಟೊಂಕ ಕಟ್ಟಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್