ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

Suvarna News   | Asianet News
Published : Sep 10, 2021, 03:39 PM ISTUpdated : Sep 10, 2021, 04:22 PM IST

ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 
 

ಕೊಡಗು (ಸೆ. 10): ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 

ಈ ಮೀನನ್ನು ಯಾರು ಕೂಡಾ ಹಿಡಿಯೋದಿಲ್ಲ. ಈ ಪುಟ್ಟ ತೊರೆಯ ಪಕ್ಕದಲ್ಲಿ ಭದ್ರಕಾಳಿ ದೇವಾಲಯವಿದ್ದು, ದೇವರಿಗೆ ಸೇರಿದ ಮತ್ಸ್ಯ ರಾಶಿ ಅನ್ನುವ ನಂಬಿಕೆ ಈ ಭಾಗದ ಜನರದ್ದು. ಹೀಗಾಗಿ ಇಂದಿಗೂ ಸಾವಿರಾರು ಮೀನುಗಳು ಈ ಪುಟ್ಟ ತೊರೆಯಲ್ಲಿ ಜೀವಿಸುತ್ತಿವೆ. ಮೀನುಗಳು ಹೆಚ್ಚಿರುವ ಕಾರಣಕ್ಕೆ ಈ ತೊರೆಯನ್ನ ಮೀನುಕೊಲ್ಲಿ ಅಂತ ಕರೆಯಲಾಗುತ್ತದೆ. 

ಈ ಮೀನುಗಳನ್ನ ಹಿಡಿದರೆ ಅವರ ಜೀವನದಲ್ಲಿ ಸಂಕಷ್ಟ ಎದುರಾಗುತ್ತೆ, ಅನಾಹುತ ಸಂಭವಿಸುತ್ತೆ ಅನ್ನುವ ನಂಬಿಕೆ ಬಹಳ ಹಿಂದಿನಿಂದಲೂ ಇದೆ.  ಹೀಗಾಗಿ ಅದರ ಪಾಡಿಗೆ ಬಿಟ್ಟಿದ್ದಾರೆ. ಅವುಗಳನ್ನ ಮುಟ್ಟೋದಕ್ಕೂ ಈ ಭಾಗದ ಜನ ಭಯಪಡ್ತಾರೆ. ನೀರು ಹೆಚ್ಚಾದಾಗ ಹರಿದು ಹೋಗುವ ಮೀನುಗಳು ಬಳಿಕ ನೀರು ಕಡಿಮೆಯಾಗುತ್ತಿದ್ದಂತೆ ಮರಳಿ ಈ ಸ್ಥಳಕ್ಕೆ ಬಂದು ಸೇರುತ್ತವೆ. ಕೊಡಗಿನ ಮೂವತ್ತೊಕ್ಲು ಮೀನುಕೊಲ್ಲಿಯ ಮೀನುಗಳನ್ನ ಉಳಿಸೋದಕ್ಕಾಗಿ ಗ್ರಾಮಸ್ಥರು ಟೊಂಕ ಕಟ್ಟಿದ್ದಾರೆ.

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!