ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

Published : Sep 10, 2021, 03:39 PM ISTUpdated : Sep 10, 2021, 04:22 PM IST

ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 
 

ಕೊಡಗು (ಸೆ. 10): ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 

ಈ ಮೀನನ್ನು ಯಾರು ಕೂಡಾ ಹಿಡಿಯೋದಿಲ್ಲ. ಈ ಪುಟ್ಟ ತೊರೆಯ ಪಕ್ಕದಲ್ಲಿ ಭದ್ರಕಾಳಿ ದೇವಾಲಯವಿದ್ದು, ದೇವರಿಗೆ ಸೇರಿದ ಮತ್ಸ್ಯ ರಾಶಿ ಅನ್ನುವ ನಂಬಿಕೆ ಈ ಭಾಗದ ಜನರದ್ದು. ಹೀಗಾಗಿ ಇಂದಿಗೂ ಸಾವಿರಾರು ಮೀನುಗಳು ಈ ಪುಟ್ಟ ತೊರೆಯಲ್ಲಿ ಜೀವಿಸುತ್ತಿವೆ. ಮೀನುಗಳು ಹೆಚ್ಚಿರುವ ಕಾರಣಕ್ಕೆ ಈ ತೊರೆಯನ್ನ ಮೀನುಕೊಲ್ಲಿ ಅಂತ ಕರೆಯಲಾಗುತ್ತದೆ. 

ಈ ಮೀನುಗಳನ್ನ ಹಿಡಿದರೆ ಅವರ ಜೀವನದಲ್ಲಿ ಸಂಕಷ್ಟ ಎದುರಾಗುತ್ತೆ, ಅನಾಹುತ ಸಂಭವಿಸುತ್ತೆ ಅನ್ನುವ ನಂಬಿಕೆ ಬಹಳ ಹಿಂದಿನಿಂದಲೂ ಇದೆ.  ಹೀಗಾಗಿ ಅದರ ಪಾಡಿಗೆ ಬಿಟ್ಟಿದ್ದಾರೆ. ಅವುಗಳನ್ನ ಮುಟ್ಟೋದಕ್ಕೂ ಈ ಭಾಗದ ಜನ ಭಯಪಡ್ತಾರೆ. ನೀರು ಹೆಚ್ಚಾದಾಗ ಹರಿದು ಹೋಗುವ ಮೀನುಗಳು ಬಳಿಕ ನೀರು ಕಡಿಮೆಯಾಗುತ್ತಿದ್ದಂತೆ ಮರಳಿ ಈ ಸ್ಥಳಕ್ಕೆ ಬಂದು ಸೇರುತ್ತವೆ. ಕೊಡಗಿನ ಮೂವತ್ತೊಕ್ಲು ಮೀನುಕೊಲ್ಲಿಯ ಮೀನುಗಳನ್ನ ಉಳಿಸೋದಕ್ಕಾಗಿ ಗ್ರಾಮಸ್ಥರು ಟೊಂಕ ಕಟ್ಟಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?