ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

ಸೋಮವಾರಪೇಟೆ ಮೂವತ್ತೊಕ್ಲು ಗ್ರಾಮದಲ್ಲಿದೆ ಮೀನುಕೊಲ್ಲಿ, ಆದ್ರೆ ಹಿಡಿಯುವಂತಿಲ್ಲ.!

Suvarna News   | Asianet News
Published : Sep 10, 2021, 03:39 PM ISTUpdated : Sep 10, 2021, 04:22 PM IST

ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 
 

ಕೊಡಗು (ಸೆ. 10): ಸಣ್ಣ ತೊರೆಯಲ್ಲಿ ರಾಶಿ ರಾಶಿ ಮೀನುಗಳು,  ಇದು ಅಂತಿಂತ ಮತ್ಸ್ಯ ಸಮೂಹವಲ್ಲ... ದೇವರ ಮೀನುಗಳು! ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ ಇಂಥ ಅಪರೂಪದ ಮೀನುಗಳು ಕಾಣೋದಕ್ಕೆ ಸಿಗುತ್ತವೆ. 

ಈ ಮೀನನ್ನು ಯಾರು ಕೂಡಾ ಹಿಡಿಯೋದಿಲ್ಲ. ಈ ಪುಟ್ಟ ತೊರೆಯ ಪಕ್ಕದಲ್ಲಿ ಭದ್ರಕಾಳಿ ದೇವಾಲಯವಿದ್ದು, ದೇವರಿಗೆ ಸೇರಿದ ಮತ್ಸ್ಯ ರಾಶಿ ಅನ್ನುವ ನಂಬಿಕೆ ಈ ಭಾಗದ ಜನರದ್ದು. ಹೀಗಾಗಿ ಇಂದಿಗೂ ಸಾವಿರಾರು ಮೀನುಗಳು ಈ ಪುಟ್ಟ ತೊರೆಯಲ್ಲಿ ಜೀವಿಸುತ್ತಿವೆ. ಮೀನುಗಳು ಹೆಚ್ಚಿರುವ ಕಾರಣಕ್ಕೆ ಈ ತೊರೆಯನ್ನ ಮೀನುಕೊಲ್ಲಿ ಅಂತ ಕರೆಯಲಾಗುತ್ತದೆ. 

ಈ ಮೀನುಗಳನ್ನ ಹಿಡಿದರೆ ಅವರ ಜೀವನದಲ್ಲಿ ಸಂಕಷ್ಟ ಎದುರಾಗುತ್ತೆ, ಅನಾಹುತ ಸಂಭವಿಸುತ್ತೆ ಅನ್ನುವ ನಂಬಿಕೆ ಬಹಳ ಹಿಂದಿನಿಂದಲೂ ಇದೆ.  ಹೀಗಾಗಿ ಅದರ ಪಾಡಿಗೆ ಬಿಟ್ಟಿದ್ದಾರೆ. ಅವುಗಳನ್ನ ಮುಟ್ಟೋದಕ್ಕೂ ಈ ಭಾಗದ ಜನ ಭಯಪಡ್ತಾರೆ. ನೀರು ಹೆಚ್ಚಾದಾಗ ಹರಿದು ಹೋಗುವ ಮೀನುಗಳು ಬಳಿಕ ನೀರು ಕಡಿಮೆಯಾಗುತ್ತಿದ್ದಂತೆ ಮರಳಿ ಈ ಸ್ಥಳಕ್ಕೆ ಬಂದು ಸೇರುತ್ತವೆ. ಕೊಡಗಿನ ಮೂವತ್ತೊಕ್ಲು ಮೀನುಕೊಲ್ಲಿಯ ಮೀನುಗಳನ್ನ ಉಳಿಸೋದಕ್ಕಾಗಿ ಗ್ರಾಮಸ್ಥರು ಟೊಂಕ ಕಟ್ಟಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!