ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

Published : Jul 05, 2024, 10:03 AM ISTUpdated : Jul 05, 2024, 10:04 AM IST

ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಚಿಮುಲ್‌ನಿಂದ (Kochimul) ರೈತರಿಗೆ (Farmers)ಬಿಗ್ ಶಾಕ್ ನೀಡಲಾಗಿದ್ದು, ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ದಿಢೀರನೆ 2 ರೂಪಾಯಿಯನ್ನು ಕೋಚಿಮುಲ್ ಆಡಳಿತ ಮಂಡಳಿ ಕಡಿಮೆ ಮಾಡಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ ಕಡಿತ (Milk Price) ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್‌ನಿಂದ ಆದೇಶ ಹೊರಡಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಲೀಟರ್‌ಗೆ ಪ್ರಸ್ತುತ 35.85 ರೂ ನಿಗಧಿ ಮಾಡಲಾಗಿದ್ದು, ನಾಳೆಯಿಂದ ಪರಿಷ್ಕೃತ ಪ್ರತಿ ಲೀಟರ್ ಗೆ 33.85 ರೂ. ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರಸ್ತುತ ಲೀಟರ್‌ಗೆ 33.40 ರೂ ನಿಗಧಿ ಮಾಡಿದ್ದು, ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್‌ಗೆ 31.40 ರೂ. ನೀಡಲು ಆದೇಶಿಸಲಾಗಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು (Milk)ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ - ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್ ನಷ್ಟು ಹಾಲು ಹೆಚ್ಚಳವಾಗಿದೆ. ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more