ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

Published : Jul 05, 2024, 10:03 AM ISTUpdated : Jul 05, 2024, 10:04 AM IST

ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಚಿಮುಲ್‌ನಿಂದ (Kochimul) ರೈತರಿಗೆ (Farmers)ಬಿಗ್ ಶಾಕ್ ನೀಡಲಾಗಿದ್ದು, ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ದಿಢೀರನೆ 2 ರೂಪಾಯಿಯನ್ನು ಕೋಚಿಮುಲ್ ಆಡಳಿತ ಮಂಡಳಿ ಕಡಿಮೆ ಮಾಡಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ ಕಡಿತ (Milk Price) ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್‌ನಿಂದ ಆದೇಶ ಹೊರಡಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಲೀಟರ್‌ಗೆ ಪ್ರಸ್ತುತ 35.85 ರೂ ನಿಗಧಿ ಮಾಡಲಾಗಿದ್ದು, ನಾಳೆಯಿಂದ ಪರಿಷ್ಕೃತ ಪ್ರತಿ ಲೀಟರ್ ಗೆ 33.85 ರೂ. ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರಸ್ತುತ ಲೀಟರ್‌ಗೆ 33.40 ರೂ ನಿಗಧಿ ಮಾಡಿದ್ದು, ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್‌ಗೆ 31.40 ರೂ. ನೀಡಲು ಆದೇಶಿಸಲಾಗಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು (Milk)ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ - ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್ ನಷ್ಟು ಹಾಲು ಹೆಚ್ಚಳವಾಗಿದೆ. ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more