ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

Published : Jul 05, 2024, 10:03 AM ISTUpdated : Jul 05, 2024, 10:04 AM IST

ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಚಿಮುಲ್‌ನಿಂದ (Kochimul) ರೈತರಿಗೆ (Farmers)ಬಿಗ್ ಶಾಕ್ ನೀಡಲಾಗಿದ್ದು, ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ದಿಢೀರನೆ 2 ರೂಪಾಯಿಯನ್ನು ಕೋಚಿಮುಲ್ ಆಡಳಿತ ಮಂಡಳಿ ಕಡಿಮೆ ಮಾಡಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ ಕಡಿತ (Milk Price) ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್‌ನಿಂದ ಆದೇಶ ಹೊರಡಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಲೀಟರ್‌ಗೆ ಪ್ರಸ್ತುತ 35.85 ರೂ ನಿಗಧಿ ಮಾಡಲಾಗಿದ್ದು, ನಾಳೆಯಿಂದ ಪರಿಷ್ಕೃತ ಪ್ರತಿ ಲೀಟರ್ ಗೆ 33.85 ರೂ. ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರಸ್ತುತ ಲೀಟರ್‌ಗೆ 33.40 ರೂ ನಿಗಧಿ ಮಾಡಿದ್ದು, ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್‌ಗೆ 31.40 ರೂ. ನೀಡಲು ಆದೇಶಿಸಲಾಗಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು (Milk)ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ - ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್ ನಷ್ಟು ಹಾಲು ಹೆಚ್ಚಳವಾಗಿದೆ. ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more