ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

Published : Jul 05, 2024, 10:03 AM ISTUpdated : Jul 05, 2024, 10:04 AM IST

ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಚಿಮುಲ್‌ನಿಂದ (Kochimul) ರೈತರಿಗೆ (Farmers)ಬಿಗ್ ಶಾಕ್ ನೀಡಲಾಗಿದ್ದು, ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ದಿಢೀರನೆ 2 ರೂಪಾಯಿಯನ್ನು ಕೋಚಿಮುಲ್ ಆಡಳಿತ ಮಂಡಳಿ ಕಡಿಮೆ ಮಾಡಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ ಕಡಿತ (Milk Price) ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್‌ನಿಂದ ಆದೇಶ ಹೊರಡಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಲೀಟರ್‌ಗೆ ಪ್ರಸ್ತುತ 35.85 ರೂ ನಿಗಧಿ ಮಾಡಲಾಗಿದ್ದು, ನಾಳೆಯಿಂದ ಪರಿಷ್ಕೃತ ಪ್ರತಿ ಲೀಟರ್ ಗೆ 33.85 ರೂ. ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರಸ್ತುತ ಲೀಟರ್‌ಗೆ 33.40 ರೂ ನಿಗಧಿ ಮಾಡಿದ್ದು, ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್‌ಗೆ 31.40 ರೂ. ನೀಡಲು ಆದೇಶಿಸಲಾಗಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು (Milk)ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ - ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್ ನಷ್ಟು ಹಾಲು ಹೆಚ್ಚಳವಾಗಿದೆ. ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more