Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Published : Mar 08, 2022, 11:44 AM IST

*  ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವ
* ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ 
*  ಪೋಸ್ಟರ್ ಅಂಟಿಸಲು ಅನುಮತಿ ಪಡೆಯದ ಕಾಂಗ್ರೆಸ್
 

ಕೊಡಗು(ಮಾ.08):  ಫೀಲ್ಡ್ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಭಾರತ ಸೈನ್ಯದ ಪ್ರಪ್ರಥಮ ಫೀಲ್ಡ್ ಮಾರ್ಷಲ್‌. ಮಹಾದಂಡನಾಯಕ ಕೆ.ಎಂ. ಕಾರ್ಯಪ್ಪ ಭಾರತೀಯರ ಜನಮನದಲ್ಲಿ ಎಂದೆಂದಿಗೂ ಅಮರ. ಇವರು ಕರ್ನಾಟಕದ ಕೊಡಗಿನವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.  ಭಾರತೀಯ ಸೇನೆಯಲ್ಲಿ ಅತ್ಯುನ್ನತ ಪದವಿ ಗಳಿಸಿದ್ದ ಇವರು ಶಿಸ್ತು, ಆದರ್ಶಕ್ಕೆ ಹೆಸರಾಗಿದ್ದರು. ಈ ಕಾರಣದಿಂದಲೇ ಅವರು ಕೊಡಗಿನ ಮಂದಿಗಷ್ಟೇ ಅಲ್ಲ; ಎಲ್ಲ ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವವಾಗಿದ್ದರೆ. ಇವರ ಸೇನೆಯ ಬದುಕಿನ ರೋಚಕ ಕ್ಷಣಗಳು ರೋಮಾಂಚನಗೊಂಡು ನಮ್ಮಲ್ಲೊಂದು ಕಿಡಿ ಹಚ್ಚುವಂತೆ ಮಾಡುತ್ತದೆ. 

ಇಂಥ ಮಹಾನ್‌ ನಾಯಕನಿಗೆ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗಿನ ಜನರ ಹಲವು ವರ್ಷದ ಬೇಡಿಕೆಯಾಗಿದೆ. ದೇಶದ ಮೊಟ್ಟ ಮೊದಲ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗು ಜಿಲ್ಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಹೊಸ ಅಭಿಯಾನ ಶುರುಮಾಡಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವಕ್ತಾರ ಬ್ರಿಜೆಶ್ ಕಾಳಪ್ಪ ಅವರ  ಭಾವಚಿತ್ರವಿರುವ ಪೋಸ್ಟರ್ ನಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ಯಾಕೆ ನೀಡಿಲ್ಲ ಅಂತ ಪ್ರಶ್ನೆ ಮಾಡಲಾಗಿದೆ. 

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕಾರ್ಯಪ್ಪನವರಿಗೆ ಭಾರತ ರತ್ನ ನೀಡಬೇಕೆಂದು ಅಭಿಯಾನ ಮಾಡುವ ಮೂಲಕ ಅವರಿಗೆ ಅವಮಾನ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮನೆ ಮನೆಗಳಲ್ಲಿ ಆರಾಧಿಸಲ್ಪಡುವ ಕಾರ್ಯಪ್ಪ ಅವರ ಭಾವಚಿತ್ರ ಇಲ್ಲಿ ಕಂಡವರ ಕಾಲ ಕಸವಾಗುತ್ತಿದೆ. ಕೊಡಗಿನ ಹಲವು ಬಸ್ ನಿಲ್ದಾಣಗಳಲ್ಲಿ ಕಾರ್ಯಪ್ಪ ಅವರ ಭಾವಚಿತ್ರ ಇರೋ ದೊಡ್ಡ ಪೋಸ್ಟರ್ ಅಂಟಿಸಲಾಗಿದೆ. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಹೀಗೆ ಪೋಸ್ಟರ್ ಹಾಕುವ ಮೊದಲು ಸಂಬಂಧ ಪಟ್ಟ ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ರೆ ಪೋಸ್ಟರ್ ಅಂಟಿಸಿದವರು ಅಂತಹ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ಈ ಪೋಸ್ಟರ್ಗಳನ್ನು  ಯಾರು ಯಾರೋ ಹರಿದು ಹಾಕಿದ್ದು ಬೇಕಾಬಿಟ್ಟಿ ಕಸವಾಗಿ ಬೀದಿಯಲ್ಲಿ ಎಸೆಯಲ್ಪಟ್ಟಿರುವುದನ್ನು  ಗಮನಿಸಿದ  ಸ್ಥಳೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಳಲು ಬಸ್ ನಿಲ್ದಾಣಗಳು ವೇದಿಕೆಯಲ್ಲ. ಅದಕ್ಕೆ ಅದರದ್ದೇ ಆದ ವೇದಿಕೆ ಇದೆ. ಅಂತಹ ಉನ್ನತ ಸ್ಥಳದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಗ್ರಹ ಮಾಡಬೇಕೇ ಹೊರತು ಹೀಗೆ ಪೋಸ್ಟರ್ ಹಾಕಿ ಅಲ್ಲ ಅಂತ ಸ್ಥಳೀಯರು ಟೀಕಿಸುತ್ತಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more