Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Published : Mar 08, 2022, 11:44 AM IST

*  ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವ
* ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ 
*  ಪೋಸ್ಟರ್ ಅಂಟಿಸಲು ಅನುಮತಿ ಪಡೆಯದ ಕಾಂಗ್ರೆಸ್
 

ಕೊಡಗು(ಮಾ.08):  ಫೀಲ್ಡ್ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಭಾರತ ಸೈನ್ಯದ ಪ್ರಪ್ರಥಮ ಫೀಲ್ಡ್ ಮಾರ್ಷಲ್‌. ಮಹಾದಂಡನಾಯಕ ಕೆ.ಎಂ. ಕಾರ್ಯಪ್ಪ ಭಾರತೀಯರ ಜನಮನದಲ್ಲಿ ಎಂದೆಂದಿಗೂ ಅಮರ. ಇವರು ಕರ್ನಾಟಕದ ಕೊಡಗಿನವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.  ಭಾರತೀಯ ಸೇನೆಯಲ್ಲಿ ಅತ್ಯುನ್ನತ ಪದವಿ ಗಳಿಸಿದ್ದ ಇವರು ಶಿಸ್ತು, ಆದರ್ಶಕ್ಕೆ ಹೆಸರಾಗಿದ್ದರು. ಈ ಕಾರಣದಿಂದಲೇ ಅವರು ಕೊಡಗಿನ ಮಂದಿಗಷ್ಟೇ ಅಲ್ಲ; ಎಲ್ಲ ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವವಾಗಿದ್ದರೆ. ಇವರ ಸೇನೆಯ ಬದುಕಿನ ರೋಚಕ ಕ್ಷಣಗಳು ರೋಮಾಂಚನಗೊಂಡು ನಮ್ಮಲ್ಲೊಂದು ಕಿಡಿ ಹಚ್ಚುವಂತೆ ಮಾಡುತ್ತದೆ. 

ಇಂಥ ಮಹಾನ್‌ ನಾಯಕನಿಗೆ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗಿನ ಜನರ ಹಲವು ವರ್ಷದ ಬೇಡಿಕೆಯಾಗಿದೆ. ದೇಶದ ಮೊಟ್ಟ ಮೊದಲ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗು ಜಿಲ್ಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಹೊಸ ಅಭಿಯಾನ ಶುರುಮಾಡಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವಕ್ತಾರ ಬ್ರಿಜೆಶ್ ಕಾಳಪ್ಪ ಅವರ  ಭಾವಚಿತ್ರವಿರುವ ಪೋಸ್ಟರ್ ನಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ಯಾಕೆ ನೀಡಿಲ್ಲ ಅಂತ ಪ್ರಶ್ನೆ ಮಾಡಲಾಗಿದೆ. 

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕಾರ್ಯಪ್ಪನವರಿಗೆ ಭಾರತ ರತ್ನ ನೀಡಬೇಕೆಂದು ಅಭಿಯಾನ ಮಾಡುವ ಮೂಲಕ ಅವರಿಗೆ ಅವಮಾನ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮನೆ ಮನೆಗಳಲ್ಲಿ ಆರಾಧಿಸಲ್ಪಡುವ ಕಾರ್ಯಪ್ಪ ಅವರ ಭಾವಚಿತ್ರ ಇಲ್ಲಿ ಕಂಡವರ ಕಾಲ ಕಸವಾಗುತ್ತಿದೆ. ಕೊಡಗಿನ ಹಲವು ಬಸ್ ನಿಲ್ದಾಣಗಳಲ್ಲಿ ಕಾರ್ಯಪ್ಪ ಅವರ ಭಾವಚಿತ್ರ ಇರೋ ದೊಡ್ಡ ಪೋಸ್ಟರ್ ಅಂಟಿಸಲಾಗಿದೆ. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಹೀಗೆ ಪೋಸ್ಟರ್ ಹಾಕುವ ಮೊದಲು ಸಂಬಂಧ ಪಟ್ಟ ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ರೆ ಪೋಸ್ಟರ್ ಅಂಟಿಸಿದವರು ಅಂತಹ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ಈ ಪೋಸ್ಟರ್ಗಳನ್ನು  ಯಾರು ಯಾರೋ ಹರಿದು ಹಾಕಿದ್ದು ಬೇಕಾಬಿಟ್ಟಿ ಕಸವಾಗಿ ಬೀದಿಯಲ್ಲಿ ಎಸೆಯಲ್ಪಟ್ಟಿರುವುದನ್ನು  ಗಮನಿಸಿದ  ಸ್ಥಳೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಳಲು ಬಸ್ ನಿಲ್ದಾಣಗಳು ವೇದಿಕೆಯಲ್ಲ. ಅದಕ್ಕೆ ಅದರದ್ದೇ ಆದ ವೇದಿಕೆ ಇದೆ. ಅಂತಹ ಉನ್ನತ ಸ್ಥಳದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಗ್ರಹ ಮಾಡಬೇಕೇ ಹೊರತು ಹೀಗೆ ಪೋಸ್ಟರ್ ಹಾಕಿ ಅಲ್ಲ ಅಂತ ಸ್ಥಳೀಯರು ಟೀಕಿಸುತ್ತಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more