Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Published : Mar 08, 2022, 11:44 AM IST

*  ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವ
* ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ 
*  ಪೋಸ್ಟರ್ ಅಂಟಿಸಲು ಅನುಮತಿ ಪಡೆಯದ ಕಾಂಗ್ರೆಸ್
 

ಕೊಡಗು(ಮಾ.08):  ಫೀಲ್ಡ್ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಭಾರತ ಸೈನ್ಯದ ಪ್ರಪ್ರಥಮ ಫೀಲ್ಡ್ ಮಾರ್ಷಲ್‌. ಮಹಾದಂಡನಾಯಕ ಕೆ.ಎಂ. ಕಾರ್ಯಪ್ಪ ಭಾರತೀಯರ ಜನಮನದಲ್ಲಿ ಎಂದೆಂದಿಗೂ ಅಮರ. ಇವರು ಕರ್ನಾಟಕದ ಕೊಡಗಿನವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.  ಭಾರತೀಯ ಸೇನೆಯಲ್ಲಿ ಅತ್ಯುನ್ನತ ಪದವಿ ಗಳಿಸಿದ್ದ ಇವರು ಶಿಸ್ತು, ಆದರ್ಶಕ್ಕೆ ಹೆಸರಾಗಿದ್ದರು. ಈ ಕಾರಣದಿಂದಲೇ ಅವರು ಕೊಡಗಿನ ಮಂದಿಗಷ್ಟೇ ಅಲ್ಲ; ಎಲ್ಲ ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವವಾಗಿದ್ದರೆ. ಇವರ ಸೇನೆಯ ಬದುಕಿನ ರೋಚಕ ಕ್ಷಣಗಳು ರೋಮಾಂಚನಗೊಂಡು ನಮ್ಮಲ್ಲೊಂದು ಕಿಡಿ ಹಚ್ಚುವಂತೆ ಮಾಡುತ್ತದೆ. 

ಇಂಥ ಮಹಾನ್‌ ನಾಯಕನಿಗೆ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗಿನ ಜನರ ಹಲವು ವರ್ಷದ ಬೇಡಿಕೆಯಾಗಿದೆ. ದೇಶದ ಮೊಟ್ಟ ಮೊದಲ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗು ಜಿಲ್ಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಹೊಸ ಅಭಿಯಾನ ಶುರುಮಾಡಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವಕ್ತಾರ ಬ್ರಿಜೆಶ್ ಕಾಳಪ್ಪ ಅವರ  ಭಾವಚಿತ್ರವಿರುವ ಪೋಸ್ಟರ್ ನಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ಯಾಕೆ ನೀಡಿಲ್ಲ ಅಂತ ಪ್ರಶ್ನೆ ಮಾಡಲಾಗಿದೆ. 

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕಾರ್ಯಪ್ಪನವರಿಗೆ ಭಾರತ ರತ್ನ ನೀಡಬೇಕೆಂದು ಅಭಿಯಾನ ಮಾಡುವ ಮೂಲಕ ಅವರಿಗೆ ಅವಮಾನ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮನೆ ಮನೆಗಳಲ್ಲಿ ಆರಾಧಿಸಲ್ಪಡುವ ಕಾರ್ಯಪ್ಪ ಅವರ ಭಾವಚಿತ್ರ ಇಲ್ಲಿ ಕಂಡವರ ಕಾಲ ಕಸವಾಗುತ್ತಿದೆ. ಕೊಡಗಿನ ಹಲವು ಬಸ್ ನಿಲ್ದಾಣಗಳಲ್ಲಿ ಕಾರ್ಯಪ್ಪ ಅವರ ಭಾವಚಿತ್ರ ಇರೋ ದೊಡ್ಡ ಪೋಸ್ಟರ್ ಅಂಟಿಸಲಾಗಿದೆ. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಹೀಗೆ ಪೋಸ್ಟರ್ ಹಾಕುವ ಮೊದಲು ಸಂಬಂಧ ಪಟ್ಟ ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ರೆ ಪೋಸ್ಟರ್ ಅಂಟಿಸಿದವರು ಅಂತಹ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ಈ ಪೋಸ್ಟರ್ಗಳನ್ನು  ಯಾರು ಯಾರೋ ಹರಿದು ಹಾಕಿದ್ದು ಬೇಕಾಬಿಟ್ಟಿ ಕಸವಾಗಿ ಬೀದಿಯಲ್ಲಿ ಎಸೆಯಲ್ಪಟ್ಟಿರುವುದನ್ನು  ಗಮನಿಸಿದ  ಸ್ಥಳೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಳಲು ಬಸ್ ನಿಲ್ದಾಣಗಳು ವೇದಿಕೆಯಲ್ಲ. ಅದಕ್ಕೆ ಅದರದ್ದೇ ಆದ ವೇದಿಕೆ ಇದೆ. ಅಂತಹ ಉನ್ನತ ಸ್ಥಳದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಗ್ರಹ ಮಾಡಬೇಕೇ ಹೊರತು ಹೀಗೆ ಪೋಸ್ಟರ್ ಹಾಕಿ ಅಲ್ಲ ಅಂತ ಸ್ಥಳೀಯರು ಟೀಕಿಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more