Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Published : Mar 08, 2022, 11:44 AM IST

*  ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವ
* ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ 
*  ಪೋಸ್ಟರ್ ಅಂಟಿಸಲು ಅನುಮತಿ ಪಡೆಯದ ಕಾಂಗ್ರೆಸ್
 

ಕೊಡಗು(ಮಾ.08):  ಫೀಲ್ಡ್ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಭಾರತ ಸೈನ್ಯದ ಪ್ರಪ್ರಥಮ ಫೀಲ್ಡ್ ಮಾರ್ಷಲ್‌. ಮಹಾದಂಡನಾಯಕ ಕೆ.ಎಂ. ಕಾರ್ಯಪ್ಪ ಭಾರತೀಯರ ಜನಮನದಲ್ಲಿ ಎಂದೆಂದಿಗೂ ಅಮರ. ಇವರು ಕರ್ನಾಟಕದ ಕೊಡಗಿನವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.  ಭಾರತೀಯ ಸೇನೆಯಲ್ಲಿ ಅತ್ಯುನ್ನತ ಪದವಿ ಗಳಿಸಿದ್ದ ಇವರು ಶಿಸ್ತು, ಆದರ್ಶಕ್ಕೆ ಹೆಸರಾಗಿದ್ದರು. ಈ ಕಾರಣದಿಂದಲೇ ಅವರು ಕೊಡಗಿನ ಮಂದಿಗಷ್ಟೇ ಅಲ್ಲ; ಎಲ್ಲ ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವವಾಗಿದ್ದರೆ. ಇವರ ಸೇನೆಯ ಬದುಕಿನ ರೋಚಕ ಕ್ಷಣಗಳು ರೋಮಾಂಚನಗೊಂಡು ನಮ್ಮಲ್ಲೊಂದು ಕಿಡಿ ಹಚ್ಚುವಂತೆ ಮಾಡುತ್ತದೆ. 

ಇಂಥ ಮಹಾನ್‌ ನಾಯಕನಿಗೆ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗಿನ ಜನರ ಹಲವು ವರ್ಷದ ಬೇಡಿಕೆಯಾಗಿದೆ. ದೇಶದ ಮೊಟ್ಟ ಮೊದಲ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗು ಜಿಲ್ಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಹೊಸ ಅಭಿಯಾನ ಶುರುಮಾಡಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವಕ್ತಾರ ಬ್ರಿಜೆಶ್ ಕಾಳಪ್ಪ ಅವರ  ಭಾವಚಿತ್ರವಿರುವ ಪೋಸ್ಟರ್ ನಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ಯಾಕೆ ನೀಡಿಲ್ಲ ಅಂತ ಪ್ರಶ್ನೆ ಮಾಡಲಾಗಿದೆ. 

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕಾರ್ಯಪ್ಪನವರಿಗೆ ಭಾರತ ರತ್ನ ನೀಡಬೇಕೆಂದು ಅಭಿಯಾನ ಮಾಡುವ ಮೂಲಕ ಅವರಿಗೆ ಅವಮಾನ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮನೆ ಮನೆಗಳಲ್ಲಿ ಆರಾಧಿಸಲ್ಪಡುವ ಕಾರ್ಯಪ್ಪ ಅವರ ಭಾವಚಿತ್ರ ಇಲ್ಲಿ ಕಂಡವರ ಕಾಲ ಕಸವಾಗುತ್ತಿದೆ. ಕೊಡಗಿನ ಹಲವು ಬಸ್ ನಿಲ್ದಾಣಗಳಲ್ಲಿ ಕಾರ್ಯಪ್ಪ ಅವರ ಭಾವಚಿತ್ರ ಇರೋ ದೊಡ್ಡ ಪೋಸ್ಟರ್ ಅಂಟಿಸಲಾಗಿದೆ. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಹೀಗೆ ಪೋಸ್ಟರ್ ಹಾಕುವ ಮೊದಲು ಸಂಬಂಧ ಪಟ್ಟ ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ರೆ ಪೋಸ್ಟರ್ ಅಂಟಿಸಿದವರು ಅಂತಹ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ಈ ಪೋಸ್ಟರ್ಗಳನ್ನು  ಯಾರು ಯಾರೋ ಹರಿದು ಹಾಕಿದ್ದು ಬೇಕಾಬಿಟ್ಟಿ ಕಸವಾಗಿ ಬೀದಿಯಲ್ಲಿ ಎಸೆಯಲ್ಪಟ್ಟಿರುವುದನ್ನು  ಗಮನಿಸಿದ  ಸ್ಥಳೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಳಲು ಬಸ್ ನಿಲ್ದಾಣಗಳು ವೇದಿಕೆಯಲ್ಲ. ಅದಕ್ಕೆ ಅದರದ್ದೇ ಆದ ವೇದಿಕೆ ಇದೆ. ಅಂತಹ ಉನ್ನತ ಸ್ಥಳದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಗ್ರಹ ಮಾಡಬೇಕೇ ಹೊರತು ಹೀಗೆ ಪೋಸ್ಟರ್ ಹಾಕಿ ಅಲ್ಲ ಅಂತ ಸ್ಥಳೀಯರು ಟೀಕಿಸುತ್ತಿದ್ದಾರೆ. 
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more