Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Kodagu: ಹೆಮ್ಮೆಯ ಕನ್ನಡಿಗ ಫೀಲ್ಡ್ ಮಾರ್ಷಲ್‌ ಕಾರ್ಯಪ್ಪಗೆ ಭಾರತ ರತ್ನಕ್ಕಾಗಿ ಅಭಿಯಾನ

Published : Mar 08, 2022, 11:44 AM IST

*  ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವ
* ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ 
*  ಪೋಸ್ಟರ್ ಅಂಟಿಸಲು ಅನುಮತಿ ಪಡೆಯದ ಕಾಂಗ್ರೆಸ್
 

ಕೊಡಗು(ಮಾ.08):  ಫೀಲ್ಡ್ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಭಾರತ ಸೈನ್ಯದ ಪ್ರಪ್ರಥಮ ಫೀಲ್ಡ್ ಮಾರ್ಷಲ್‌. ಮಹಾದಂಡನಾಯಕ ಕೆ.ಎಂ. ಕಾರ್ಯಪ್ಪ ಭಾರತೀಯರ ಜನಮನದಲ್ಲಿ ಎಂದೆಂದಿಗೂ ಅಮರ. ಇವರು ಕರ್ನಾಟಕದ ಕೊಡಗಿನವರು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.  ಭಾರತೀಯ ಸೇನೆಯಲ್ಲಿ ಅತ್ಯುನ್ನತ ಪದವಿ ಗಳಿಸಿದ್ದ ಇವರು ಶಿಸ್ತು, ಆದರ್ಶಕ್ಕೆ ಹೆಸರಾಗಿದ್ದರು. ಈ ಕಾರಣದಿಂದಲೇ ಅವರು ಕೊಡಗಿನ ಮಂದಿಗಷ್ಟೇ ಅಲ್ಲ; ಎಲ್ಲ ಯುವಕರ ಪಾಲಿಗೆ ಸ್ಫೂರ್ತಿಯ ವ್ಯಕ್ತಿತ್ವವಾಗಿದ್ದರೆ. ಇವರ ಸೇನೆಯ ಬದುಕಿನ ರೋಚಕ ಕ್ಷಣಗಳು ರೋಮಾಂಚನಗೊಂಡು ನಮ್ಮಲ್ಲೊಂದು ಕಿಡಿ ಹಚ್ಚುವಂತೆ ಮಾಡುತ್ತದೆ. 

ಇಂಥ ಮಹಾನ್‌ ನಾಯಕನಿಗೆ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗಿನ ಜನರ ಹಲವು ವರ್ಷದ ಬೇಡಿಕೆಯಾಗಿದೆ. ದೇಶದ ಮೊಟ್ಟ ಮೊದಲ ಕಮಾಂಡರ್‌ ಇನ್‌ ಚೀಫ್‌ ಆಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಸಿಗಬೇಕು ಎಂದು ಕೊಡಗು ಜಿಲ್ಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಹೊಸ ಅಭಿಯಾನ ಶುರುಮಾಡಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ವಕ್ತಾರ ಬ್ರಿಜೆಶ್ ಕಾಳಪ್ಪ ಅವರ  ಭಾವಚಿತ್ರವಿರುವ ಪೋಸ್ಟರ್ ನಲ್ಲಿ ಕಾರ್ಯಪ್ಪ ಅವರಿಗೆ ಭಾರತ ರತ್ನ ಯಾಕೆ ನೀಡಿಲ್ಲ ಅಂತ ಪ್ರಶ್ನೆ ಮಾಡಲಾಗಿದೆ. 

Vijaypura: ಇಲ್ಲಿನ ದೇವರಿಗೆ ನೈವೇದ್ಯಕ್ಕೆ ಸಾರಾಯಿನೇ ಬೇಕು: ಎಣ್ಣೆ ಇಲ್ದೆ ಏನೂ ಇಲ್ಲ..!

ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕಾರ್ಯಪ್ಪನವರಿಗೆ ಭಾರತ ರತ್ನ ನೀಡಬೇಕೆಂದು ಅಭಿಯಾನ ಮಾಡುವ ಮೂಲಕ ಅವರಿಗೆ ಅವಮಾನ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನ ಮನೆ ಮನೆಗಳಲ್ಲಿ ಆರಾಧಿಸಲ್ಪಡುವ ಕಾರ್ಯಪ್ಪ ಅವರ ಭಾವಚಿತ್ರ ಇಲ್ಲಿ ಕಂಡವರ ಕಾಲ ಕಸವಾಗುತ್ತಿದೆ. ಕೊಡಗಿನ ಹಲವು ಬಸ್ ನಿಲ್ದಾಣಗಳಲ್ಲಿ ಕಾರ್ಯಪ್ಪ ಅವರ ಭಾವಚಿತ್ರ ಇರೋ ದೊಡ್ಡ ಪೋಸ್ಟರ್ ಅಂಟಿಸಲಾಗಿದೆ. ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಹೀಗೆ ಪೋಸ್ಟರ್ ಹಾಕುವ ಮೊದಲು ಸಂಬಂಧ ಪಟ್ಟ ಸ್ಥಳೀಯಾಡಳಿತದಿಂದ ಅನುಮತಿ ಪಡೆಯಬೇಕಾಗುತ್ತದೆ. ಆದ್ರೆ ಪೋಸ್ಟರ್ ಅಂಟಿಸಿದವರು ಅಂತಹ ಯಾವುದೇ ಅನುಮತಿ ಪಡೆದುಕೊಂಡಿಲ್ಲ. ಈ ಪೋಸ್ಟರ್ಗಳನ್ನು  ಯಾರು ಯಾರೋ ಹರಿದು ಹಾಕಿದ್ದು ಬೇಕಾಬಿಟ್ಟಿ ಕಸವಾಗಿ ಬೀದಿಯಲ್ಲಿ ಎಸೆಯಲ್ಪಟ್ಟಿರುವುದನ್ನು  ಗಮನಿಸಿದ  ಸ್ಥಳೀಯರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಅವರಿಗೆ ಭಾರತ ರತ್ನ ಪ್ರಶಸ್ತಿ ಕೇಳಲು ಬಸ್ ನಿಲ್ದಾಣಗಳು ವೇದಿಕೆಯಲ್ಲ. ಅದಕ್ಕೆ ಅದರದ್ದೇ ಆದ ವೇದಿಕೆ ಇದೆ. ಅಂತಹ ಉನ್ನತ ಸ್ಥಳದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಆಗ್ರಹ ಮಾಡಬೇಕೇ ಹೊರತು ಹೀಗೆ ಪೋಸ್ಟರ್ ಹಾಕಿ ಅಲ್ಲ ಅಂತ ಸ್ಥಳೀಯರು ಟೀಕಿಸುತ್ತಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more