ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

Published : Sep 05, 2023, 02:49 PM IST

ಅಂದು ಆ ಘಟನೆಯಿಂದ ಇಡೀ ಕರುನಾಡು ಬೆಚ್ಚಿಬಿದ್ದಿತ್ತು. ಆ ಜನರ ಸಂಕಟವಂತೂ ಹೇಳತೀರದಾಗಿತ್ತು. ಇದ್ದಕ್ಕಿದ್ದಂತೆ ಆ ಜನ ಕಣ್ಣೀರಲ್ಲಿ ಮುಳುಗಿ ಹೋಗಿದ್ರು. ದಿಕ್ಕು ತೋಚದಂತೆ ಕಂಗಲಾಗಿದ್ರು. ಹೆಚ್ಚುಕಮ್ಮಿ ಅದು ನಡೆದು ನಾಲ್ಕು ವರ್ಷ ಆದ್ರೂ ಅವರಿಗೆ ಇನ್ನೂ ನೆಮ್ಮದಿ ಅನ್ನೋದು ಸಿಕ್ಕಿಲ್ಲ. ಅಷ್ಟಕ್ಕೂ ಏನದು ಸ್ಟೋರಿ ಗೊತ್ತಾ..? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಅಂದು ಕಾವೇರಿ ಮುನಿಸಿಕೊಂಡು ಇಡೀ ಕೊಡಗು ಜಿಲ್ಲೆಯನ್ನು ನೆಲಸಮ ಮಾಡಿದ್ದನ್ನು ಇನ್ನೂ ಯಾರೂ ಕೂಡ ಮರೆತಿಲ್ಲ. ಸಾವಿರಾರು ಜನ ತಮ್ಮ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಬೀದಿಗೆ ಬಿದ್ದಿದ್ರು. ಆದ್ರೆ ಅವರ ಸ್ಥಿತಿ ಇನ್ನೂ ಬದಲಾಗಿಲ್ಲ. ಕಣ್ಣೀರಲ್ಲಿ ಇನ್ನೂ ದಿನ ದೂಡುತ್ತಿದ್ದಾರೆ.  ಇದು 2019ರಲ್ಲಿ ಕಾವೇರಿ ನದಿ ಪ್ರವಾಹ(Flood) ಬಂದು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರ ಸ್ಥಿತಿ. ಇತ್ತ ಕೂಲಿ ಮಾಡಿ ಬಾಡಿಗೆ ಕಟ್ಟಲಾಗುತ್ತಿಲ್ಲ ಎಂದು ದಯಾಮರಣಕ್ಕೆ ಮನವಿ ಮಾಡಿ ಕಾಯುತ್ತಿರುವ ವೃದ್ಧೆ. ಹೊಳೆ ದಂಡೆಯಲ್ಲಿ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ಕಾಲ ದೂಡುತ್ತಿರುವ ಕುಟುಂಬಗಳು. 

ಇಂದು ಮನೆ ಸಿಗುತ್ತೆ, ನಾಳೆ ಮನೆ ಸಿಗುತ್ತೇ ಎಂದು ಕಾಯುತ್ತಲೇ ಬಾಡಿಗೆ ಮನೆಯಲ್ಲೇ ಪ್ರಾಣ ಬಿಡುತ್ತಿರುವ ಹಿರಿಯ ಜೀವಗಳು. ಇದು ಕೊಡಗು ಜಿಲ್ಲೆಯಲ್ಲಿ 2019ರ ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡು ಇಂದಿಗೂ ಸ್ವಂತ ಸೂರಿಲ್ಲದೆ ನರಳುತ್ತಿರುವ ಕುಟುಂಬಗಳ ಕಥೆ. ಅಂದು ಕಾವೇರಿ ಉಕ್ಕಿ ಹರಿದು ಪ್ರವಾಹದಲ್ಲಿ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ 140ಕ್ಕೂ ಹೆಚ್ಚು ಕುಟುಂಬಗಳು(Family) ಮನೆ ಕಳೆದುಕೊಂಡು ಬೀದಿಗೆ ಬಂದಿದ್ದವು. ಆದರೆ ಇಂದಿಗೂ ಆ ಕುಟುಂಬಗಳಿಗೆ ಮನೆ ಅಥವಾ ಪರಿಹಾರ ನೀಡಿಲ್ಲ. ಕುಂಬಾರಗುಂಡಿ ಗ್ರಾಮದ ಶಾಂತಿ ಎಂಬುವರು ಕೂಲಿ ಮಾಡಿ ಬಾಡಿಗೆ ಕಟ್ಟಲಾಗದೆ ಮನೆ(House) ಕೊಡಿ, ಇಲ್ಲವೆ  ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಅಂದೇ ಶಾಶ್ವತ ಸೂರಿಗಾಗಿ ಪ್ರತಿಭಟನೆ(Protest) ನಡೆಸಿದ್ದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡಿನಲ್ಲಿ 8.5 ಎಕರೆ ಸರ್ಕಾರಿ ಜಾಗವನ್ನು ಅಲರ್ಟ್ ಮಾಡಿತ್ತು. ಆದ್ರೆ ನಿವೇಶನ ಇದೀಗ ಪಾಳು ಬಿದ್ದಿದೆ. ಇಂದಿಗೂ ಅದನ್ನು ಬಡಾವಣೆಯಾಗಿ ಪರಿವರ್ತಿಸಿಲ್ಲ. ವಿದ್ಯುತ್ ಸಂಪರ್ಕ, ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯವಿಲ್ಲ. ಇದಕ್ಕಾಗಿ 8 ಕೋಟಿ ರೂಪಾಯಿಯಷ್ಟು ಹಣ ಬೇಕಾಗುತ್ತದೆ. ಸರ್ಕಾರ ಈ ಅನುದಾನ ನೀಡಿದರೆ ಮಾತ್ರವೇ ಈ ಕುಟುಂಬಗಳು ಸರ್ಕಾರ ಗುರುತ್ತಿಸಿರುವ ಜಾಗದಲ್ಲಿ ನೆಲೆ ನಿಲ್ಲಲು ಸಾಧ್ಯ. ಇಲ್ಲದಿದ್ದರೆ ಇದೇ ಅತಂತ್ರ ಸ್ಥಿತಿಯಲ್ಲೇ ನೂರಾರು ಕುಟುಂಬಗಳು ಜೀವನ ನಡೆಸಬೇಕಾಗುತ್ತದೆ ಎನ್ನುವುದು ಹೋರಾಟಗಾರರ ಆಕ್ರೋಶ.

ಇದನ್ನೂ ವೀಕ್ಷಿಸಿ:  ಆಂಟಿಗೆ ಮೆಸೇಜ್ ಮಾಡಿದವನು ಹೆಣವಾದ..! ಸಂಜೆ ರಾಜಿ ಪಂಚಾಯ್ತಿ.. ರಾತ್ರಿ ಮರ್ಡರ್..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more