ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

Published : Sep 05, 2023, 02:49 PM IST

ಅಂದು ಆ ಘಟನೆಯಿಂದ ಇಡೀ ಕರುನಾಡು ಬೆಚ್ಚಿಬಿದ್ದಿತ್ತು. ಆ ಜನರ ಸಂಕಟವಂತೂ ಹೇಳತೀರದಾಗಿತ್ತು. ಇದ್ದಕ್ಕಿದ್ದಂತೆ ಆ ಜನ ಕಣ್ಣೀರಲ್ಲಿ ಮುಳುಗಿ ಹೋಗಿದ್ರು. ದಿಕ್ಕು ತೋಚದಂತೆ ಕಂಗಲಾಗಿದ್ರು. ಹೆಚ್ಚುಕಮ್ಮಿ ಅದು ನಡೆದು ನಾಲ್ಕು ವರ್ಷ ಆದ್ರೂ ಅವರಿಗೆ ಇನ್ನೂ ನೆಮ್ಮದಿ ಅನ್ನೋದು ಸಿಕ್ಕಿಲ್ಲ. ಅಷ್ಟಕ್ಕೂ ಏನದು ಸ್ಟೋರಿ ಗೊತ್ತಾ..? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಅಂದು ಕಾವೇರಿ ಮುನಿಸಿಕೊಂಡು ಇಡೀ ಕೊಡಗು ಜಿಲ್ಲೆಯನ್ನು ನೆಲಸಮ ಮಾಡಿದ್ದನ್ನು ಇನ್ನೂ ಯಾರೂ ಕೂಡ ಮರೆತಿಲ್ಲ. ಸಾವಿರಾರು ಜನ ತಮ್ಮ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಬೀದಿಗೆ ಬಿದ್ದಿದ್ರು. ಆದ್ರೆ ಅವರ ಸ್ಥಿತಿ ಇನ್ನೂ ಬದಲಾಗಿಲ್ಲ. ಕಣ್ಣೀರಲ್ಲಿ ಇನ್ನೂ ದಿನ ದೂಡುತ್ತಿದ್ದಾರೆ.  ಇದು 2019ರಲ್ಲಿ ಕಾವೇರಿ ನದಿ ಪ್ರವಾಹ(Flood) ಬಂದು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರ ಸ್ಥಿತಿ. ಇತ್ತ ಕೂಲಿ ಮಾಡಿ ಬಾಡಿಗೆ ಕಟ್ಟಲಾಗುತ್ತಿಲ್ಲ ಎಂದು ದಯಾಮರಣಕ್ಕೆ ಮನವಿ ಮಾಡಿ ಕಾಯುತ್ತಿರುವ ವೃದ್ಧೆ. ಹೊಳೆ ದಂಡೆಯಲ್ಲಿ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ಕಾಲ ದೂಡುತ್ತಿರುವ ಕುಟುಂಬಗಳು. 

ಇಂದು ಮನೆ ಸಿಗುತ್ತೆ, ನಾಳೆ ಮನೆ ಸಿಗುತ್ತೇ ಎಂದು ಕಾಯುತ್ತಲೇ ಬಾಡಿಗೆ ಮನೆಯಲ್ಲೇ ಪ್ರಾಣ ಬಿಡುತ್ತಿರುವ ಹಿರಿಯ ಜೀವಗಳು. ಇದು ಕೊಡಗು ಜಿಲ್ಲೆಯಲ್ಲಿ 2019ರ ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡು ಇಂದಿಗೂ ಸ್ವಂತ ಸೂರಿಲ್ಲದೆ ನರಳುತ್ತಿರುವ ಕುಟುಂಬಗಳ ಕಥೆ. ಅಂದು ಕಾವೇರಿ ಉಕ್ಕಿ ಹರಿದು ಪ್ರವಾಹದಲ್ಲಿ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ 140ಕ್ಕೂ ಹೆಚ್ಚು ಕುಟುಂಬಗಳು(Family) ಮನೆ ಕಳೆದುಕೊಂಡು ಬೀದಿಗೆ ಬಂದಿದ್ದವು. ಆದರೆ ಇಂದಿಗೂ ಆ ಕುಟುಂಬಗಳಿಗೆ ಮನೆ ಅಥವಾ ಪರಿಹಾರ ನೀಡಿಲ್ಲ. ಕುಂಬಾರಗುಂಡಿ ಗ್ರಾಮದ ಶಾಂತಿ ಎಂಬುವರು ಕೂಲಿ ಮಾಡಿ ಬಾಡಿಗೆ ಕಟ್ಟಲಾಗದೆ ಮನೆ(House) ಕೊಡಿ, ಇಲ್ಲವೆ  ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಅಂದೇ ಶಾಶ್ವತ ಸೂರಿಗಾಗಿ ಪ್ರತಿಭಟನೆ(Protest) ನಡೆಸಿದ್ದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡಿನಲ್ಲಿ 8.5 ಎಕರೆ ಸರ್ಕಾರಿ ಜಾಗವನ್ನು ಅಲರ್ಟ್ ಮಾಡಿತ್ತು. ಆದ್ರೆ ನಿವೇಶನ ಇದೀಗ ಪಾಳು ಬಿದ್ದಿದೆ. ಇಂದಿಗೂ ಅದನ್ನು ಬಡಾವಣೆಯಾಗಿ ಪರಿವರ್ತಿಸಿಲ್ಲ. ವಿದ್ಯುತ್ ಸಂಪರ್ಕ, ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯವಿಲ್ಲ. ಇದಕ್ಕಾಗಿ 8 ಕೋಟಿ ರೂಪಾಯಿಯಷ್ಟು ಹಣ ಬೇಕಾಗುತ್ತದೆ. ಸರ್ಕಾರ ಈ ಅನುದಾನ ನೀಡಿದರೆ ಮಾತ್ರವೇ ಈ ಕುಟುಂಬಗಳು ಸರ್ಕಾರ ಗುರುತ್ತಿಸಿರುವ ಜಾಗದಲ್ಲಿ ನೆಲೆ ನಿಲ್ಲಲು ಸಾಧ್ಯ. ಇಲ್ಲದಿದ್ದರೆ ಇದೇ ಅತಂತ್ರ ಸ್ಥಿತಿಯಲ್ಲೇ ನೂರಾರು ಕುಟುಂಬಗಳು ಜೀವನ ನಡೆಸಬೇಕಾಗುತ್ತದೆ ಎನ್ನುವುದು ಹೋರಾಟಗಾರರ ಆಕ್ರೋಶ.

ಇದನ್ನೂ ವೀಕ್ಷಿಸಿ:  ಆಂಟಿಗೆ ಮೆಸೇಜ್ ಮಾಡಿದವನು ಹೆಣವಾದ..! ಸಂಜೆ ರಾಜಿ ಪಂಚಾಯ್ತಿ.. ರಾತ್ರಿ ಮರ್ಡರ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more