ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

ಪ್ರಕೃತಿ ವಿಕೋಪದಿಂದ ನಲುಗಿ ಹೋಗಿತ್ತು ಆ ಜಿಲ್ಲೆ..! ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತೆ ಪತ್ರ

Published : Sep 05, 2023, 02:49 PM IST

ಅಂದು ಆ ಘಟನೆಯಿಂದ ಇಡೀ ಕರುನಾಡು ಬೆಚ್ಚಿಬಿದ್ದಿತ್ತು. ಆ ಜನರ ಸಂಕಟವಂತೂ ಹೇಳತೀರದಾಗಿತ್ತು. ಇದ್ದಕ್ಕಿದ್ದಂತೆ ಆ ಜನ ಕಣ್ಣೀರಲ್ಲಿ ಮುಳುಗಿ ಹೋಗಿದ್ರು. ದಿಕ್ಕು ತೋಚದಂತೆ ಕಂಗಲಾಗಿದ್ರು. ಹೆಚ್ಚುಕಮ್ಮಿ ಅದು ನಡೆದು ನಾಲ್ಕು ವರ್ಷ ಆದ್ರೂ ಅವರಿಗೆ ಇನ್ನೂ ನೆಮ್ಮದಿ ಅನ್ನೋದು ಸಿಕ್ಕಿಲ್ಲ. ಅಷ್ಟಕ್ಕೂ ಏನದು ಸ್ಟೋರಿ ಗೊತ್ತಾ..? ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಅಂದು ಕಾವೇರಿ ಮುನಿಸಿಕೊಂಡು ಇಡೀ ಕೊಡಗು ಜಿಲ್ಲೆಯನ್ನು ನೆಲಸಮ ಮಾಡಿದ್ದನ್ನು ಇನ್ನೂ ಯಾರೂ ಕೂಡ ಮರೆತಿಲ್ಲ. ಸಾವಿರಾರು ಜನ ತಮ್ಮ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಬೀದಿಗೆ ಬಿದ್ದಿದ್ರು. ಆದ್ರೆ ಅವರ ಸ್ಥಿತಿ ಇನ್ನೂ ಬದಲಾಗಿಲ್ಲ. ಕಣ್ಣೀರಲ್ಲಿ ಇನ್ನೂ ದಿನ ದೂಡುತ್ತಿದ್ದಾರೆ.  ಇದು 2019ರಲ್ಲಿ ಕಾವೇರಿ ನದಿ ಪ್ರವಾಹ(Flood) ಬಂದು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರ ಸ್ಥಿತಿ. ಇತ್ತ ಕೂಲಿ ಮಾಡಿ ಬಾಡಿಗೆ ಕಟ್ಟಲಾಗುತ್ತಿಲ್ಲ ಎಂದು ದಯಾಮರಣಕ್ಕೆ ಮನವಿ ಮಾಡಿ ಕಾಯುತ್ತಿರುವ ವೃದ್ಧೆ. ಹೊಳೆ ದಂಡೆಯಲ್ಲಿ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ಕಾಲ ದೂಡುತ್ತಿರುವ ಕುಟುಂಬಗಳು. 

ಇಂದು ಮನೆ ಸಿಗುತ್ತೆ, ನಾಳೆ ಮನೆ ಸಿಗುತ್ತೇ ಎಂದು ಕಾಯುತ್ತಲೇ ಬಾಡಿಗೆ ಮನೆಯಲ್ಲೇ ಪ್ರಾಣ ಬಿಡುತ್ತಿರುವ ಹಿರಿಯ ಜೀವಗಳು. ಇದು ಕೊಡಗು ಜಿಲ್ಲೆಯಲ್ಲಿ 2019ರ ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡು ಇಂದಿಗೂ ಸ್ವಂತ ಸೂರಿಲ್ಲದೆ ನರಳುತ್ತಿರುವ ಕುಟುಂಬಗಳ ಕಥೆ. ಅಂದು ಕಾವೇರಿ ಉಕ್ಕಿ ಹರಿದು ಪ್ರವಾಹದಲ್ಲಿ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ 140ಕ್ಕೂ ಹೆಚ್ಚು ಕುಟುಂಬಗಳು(Family) ಮನೆ ಕಳೆದುಕೊಂಡು ಬೀದಿಗೆ ಬಂದಿದ್ದವು. ಆದರೆ ಇಂದಿಗೂ ಆ ಕುಟುಂಬಗಳಿಗೆ ಮನೆ ಅಥವಾ ಪರಿಹಾರ ನೀಡಿಲ್ಲ. ಕುಂಬಾರಗುಂಡಿ ಗ್ರಾಮದ ಶಾಂತಿ ಎಂಬುವರು ಕೂಲಿ ಮಾಡಿ ಬಾಡಿಗೆ ಕಟ್ಟಲಾಗದೆ ಮನೆ(House) ಕೊಡಿ, ಇಲ್ಲವೆ  ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಅಂದೇ ಶಾಶ್ವತ ಸೂರಿಗಾಗಿ ಪ್ರತಿಭಟನೆ(Protest) ನಡೆಸಿದ್ದ ಸಂತ್ರಸ್ತರಿಗೆ 5 ಲಕ್ಷ ರೂಪಾಯಿ ಬಿಡುಗಡೆ ಮಾಡಿ ವಾಲ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡಿನಲ್ಲಿ 8.5 ಎಕರೆ ಸರ್ಕಾರಿ ಜಾಗವನ್ನು ಅಲರ್ಟ್ ಮಾಡಿತ್ತು. ಆದ್ರೆ ನಿವೇಶನ ಇದೀಗ ಪಾಳು ಬಿದ್ದಿದೆ. ಇಂದಿಗೂ ಅದನ್ನು ಬಡಾವಣೆಯಾಗಿ ಪರಿವರ್ತಿಸಿಲ್ಲ. ವಿದ್ಯುತ್ ಸಂಪರ್ಕ, ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಸೌಕರ್ಯವಿಲ್ಲ. ಇದಕ್ಕಾಗಿ 8 ಕೋಟಿ ರೂಪಾಯಿಯಷ್ಟು ಹಣ ಬೇಕಾಗುತ್ತದೆ. ಸರ್ಕಾರ ಈ ಅನುದಾನ ನೀಡಿದರೆ ಮಾತ್ರವೇ ಈ ಕುಟುಂಬಗಳು ಸರ್ಕಾರ ಗುರುತ್ತಿಸಿರುವ ಜಾಗದಲ್ಲಿ ನೆಲೆ ನಿಲ್ಲಲು ಸಾಧ್ಯ. ಇಲ್ಲದಿದ್ದರೆ ಇದೇ ಅತಂತ್ರ ಸ್ಥಿತಿಯಲ್ಲೇ ನೂರಾರು ಕುಟುಂಬಗಳು ಜೀವನ ನಡೆಸಬೇಕಾಗುತ್ತದೆ ಎನ್ನುವುದು ಹೋರಾಟಗಾರರ ಆಕ್ರೋಶ.

ಇದನ್ನೂ ವೀಕ್ಷಿಸಿ:  ಆಂಟಿಗೆ ಮೆಸೇಜ್ ಮಾಡಿದವನು ಹೆಣವಾದ..! ಸಂಜೆ ರಾಜಿ ಪಂಚಾಯ್ತಿ.. ರಾತ್ರಿ ಮರ್ಡರ್..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more