ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

Published : Jun 11, 2022, 08:29 AM ISTUpdated : Jun 11, 2022, 08:31 AM IST

- ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಹೈರಾಣಾಗಿರುವ ಜನ

- ಹಳೆಯ ಐಡಿಯಾವನ್ನ ಹೊಸದಾಗಿ ಜಾರಿಗೆ ತರಲು ಚಿಂತನೆ

- ಆನೆಗಳ ಚಲನವಲನ ಟ್ರ್ಯಾಕ್ ಮಾಡಲು ರೇಡಿಯೋ ಕಾಲರ್

ಕೊಡಗು ಜಿಲ್ಲೆಯ  ಜನರು ಕಾಡಾನೆಗಳ (Wild Elephant)  ಹಾವಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ ಅರ್ಥವಾಗದೆ ಅಸಹಾಯಕರಾಗಿ ಕುಳಿತಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ ಅರಣ್ಯ ಇಲಾಖೆ (Forest Department) ಹಳೆಯ ಒಂದು ಐಡಿಯಾವನ್ನೆ ಹೊಸದಾಗಿ ಜಾರಿಗೆ ತರಲು ಹೊರಟಿದೆ. ಅದೇನೆಂದ್ರೆ ಆನೆಗಳ ಚಲನವಲನ ಟ್ರ್ಯಾಕ್ ಮಾಡ್ಲಿಕ್ಕೆ ಅಂತ ರೇಡಿಯ ಕಾಲರ್  (Radio caller) ಅಳವಡಿಸುವುದು. ಆದ್ರೆ ಇದಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 300 ಕಾಡಾನೆಗಳಿವೆ. ಬಹುತೇಕ ಕಾಡಾನೆಗಳು ಕಾಫಿ ತೋಟ ಮತ್ತು ಗದ್ದೆಗಳನ್ನೆ ತಮ್ಮ ವಾಸಸ್ಥಾನವನ್ನಾಗಿಸಿಕೊಂಡಿವೆ. ಹಾಗಾಗಿ ಆನೆ ಪೀಡಿತ ಪ್ರದೇಶಗಳಲ್ಲಿ ಬೆಳೆಗಾರರಿಗೆ ಕಾಫಿ, ಬಾಳೆ, ಅಡಿಕೆ, ತೆಂಗು, ಭತ್ತ ಯಾವ ಬೆಳೆಯೂ ಕೈಗೆ ಸಿಗುತ್ತಿಲ್ಲ. ಎಷ್ಟೋ ಕಡೆಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಅದೂ ಅಲ್ಲದೆ ಆನೆಗಳ ಚಲನವಲನ ಅರಿಯಕಾಗದೆ ಎಷ್ಟೋ ಕಾರ್ಮಿಕರು, ಜನರು ಕೂಡ ಆನೆ ದಾಳಿಗೆ ಬಲಿಯಾಗಿದ್ದಾರೆ.

ಹಾಗಾಗಿ ಅರಣ್ಯ ಇಲಾಖೆ ಕೆಲವು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಮುಂದಾಗಿದೆ. ಪ್ರತಿಯೊಂದು ಆನೆಯ ಗುಂಪಿನಲ್ಲಿ ನಾಯಕ ಅಥವಾ ನಾಯಕಿ ಆನೆಯೊಂದಿರುತ್ತದೆ. ಅಂತಹ ಲೀಡರ್ ಆನೆಯನ್ನ ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಲಾಗಿದೆ. ಈ ರೀತಿ ಮಾಡುವುದರಿಂದ ಆನೆಗಳ ಚಲನವಲನ ಕಂಡು ಹಿಡಿಯುವುದು ಸಾರ್ವಜನಿಕರಿಗೆ ಮಾಹಿತಿ ನಿಡಲು ಅನುಕೂಲವಾಗುತ್ತದೆ.

ಆದ್ರೆ ಅರಣ್ಯ ಇಲಾಖೆ ತಿರ್ಮಾನಕ್ಕೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಯಾಕಂದ್ರೆ  ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಿರುವುದು ಕೇವಲ ನಾಲ್ಕು ಆನೆಗಳಿ ಮಾತ್ರ. ಆದ್ರೆ ಕೊಡಗಿನಲ್ಲಿ ನೂರಾರು ಆನೆಗಳಿವೆ. ಹತ್ತಾರು ಗುಂಪುಗಳಿವೆ. ನಾಲ್ಕು ಆನೆಗಳಿಗೆ ಇದನ್ನು ಅಳವಡಿಸುವುದರಿಂದ ಎಲ್ಲಾ ಆನೆಗಳ ಚಲನವಲನ ಗುರುತಿಸಲಾಗುವುದಿಲ್ಲ. ಅದೂ ಅಲ್ಲದೆ, ರೇಡಿಯೋ ಕಾಲರ್ ಅಳವಡಿಕೆಯಿಂದ ಆನೆಗಳನ್ನು ಗುರುತಿಸಿ ಅವುಗಳನ್ನು ಅತ್ತಿಂದಿತ್ತ ಓಡಿಸಬಹುದಷ್ಟೆ. ಆದ್ರೆ ಕಾಡು ನಾಡು ಸಂಘರ್ಷ ತಪ್ಪಿಸಲಾಗುವುದಿಲ್ಲ ಎಂಬ ಅಭಿಪ್ರಾಯವಿದೆ.
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more