ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

Published : Jun 11, 2022, 08:29 AM ISTUpdated : Jun 11, 2022, 08:31 AM IST

- ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಹೈರಾಣಾಗಿರುವ ಜನ

- ಹಳೆಯ ಐಡಿಯಾವನ್ನ ಹೊಸದಾಗಿ ಜಾರಿಗೆ ತರಲು ಚಿಂತನೆ

- ಆನೆಗಳ ಚಲನವಲನ ಟ್ರ್ಯಾಕ್ ಮಾಡಲು ರೇಡಿಯೋ ಕಾಲರ್

ಕೊಡಗು ಜಿಲ್ಲೆಯ  ಜನರು ಕಾಡಾನೆಗಳ (Wild Elephant)  ಹಾವಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ ಅರ್ಥವಾಗದೆ ಅಸಹಾಯಕರಾಗಿ ಕುಳಿತಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ ಅರಣ್ಯ ಇಲಾಖೆ (Forest Department) ಹಳೆಯ ಒಂದು ಐಡಿಯಾವನ್ನೆ ಹೊಸದಾಗಿ ಜಾರಿಗೆ ತರಲು ಹೊರಟಿದೆ. ಅದೇನೆಂದ್ರೆ ಆನೆಗಳ ಚಲನವಲನ ಟ್ರ್ಯಾಕ್ ಮಾಡ್ಲಿಕ್ಕೆ ಅಂತ ರೇಡಿಯ ಕಾಲರ್  (Radio caller) ಅಳವಡಿಸುವುದು. ಆದ್ರೆ ಇದಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 300 ಕಾಡಾನೆಗಳಿವೆ. ಬಹುತೇಕ ಕಾಡಾನೆಗಳು ಕಾಫಿ ತೋಟ ಮತ್ತು ಗದ್ದೆಗಳನ್ನೆ ತಮ್ಮ ವಾಸಸ್ಥಾನವನ್ನಾಗಿಸಿಕೊಂಡಿವೆ. ಹಾಗಾಗಿ ಆನೆ ಪೀಡಿತ ಪ್ರದೇಶಗಳಲ್ಲಿ ಬೆಳೆಗಾರರಿಗೆ ಕಾಫಿ, ಬಾಳೆ, ಅಡಿಕೆ, ತೆಂಗು, ಭತ್ತ ಯಾವ ಬೆಳೆಯೂ ಕೈಗೆ ಸಿಗುತ್ತಿಲ್ಲ. ಎಷ್ಟೋ ಕಡೆಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಅದೂ ಅಲ್ಲದೆ ಆನೆಗಳ ಚಲನವಲನ ಅರಿಯಕಾಗದೆ ಎಷ್ಟೋ ಕಾರ್ಮಿಕರು, ಜನರು ಕೂಡ ಆನೆ ದಾಳಿಗೆ ಬಲಿಯಾಗಿದ್ದಾರೆ.

ಹಾಗಾಗಿ ಅರಣ್ಯ ಇಲಾಖೆ ಕೆಲವು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಮುಂದಾಗಿದೆ. ಪ್ರತಿಯೊಂದು ಆನೆಯ ಗುಂಪಿನಲ್ಲಿ ನಾಯಕ ಅಥವಾ ನಾಯಕಿ ಆನೆಯೊಂದಿರುತ್ತದೆ. ಅಂತಹ ಲೀಡರ್ ಆನೆಯನ್ನ ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಲಾಗಿದೆ. ಈ ರೀತಿ ಮಾಡುವುದರಿಂದ ಆನೆಗಳ ಚಲನವಲನ ಕಂಡು ಹಿಡಿಯುವುದು ಸಾರ್ವಜನಿಕರಿಗೆ ಮಾಹಿತಿ ನಿಡಲು ಅನುಕೂಲವಾಗುತ್ತದೆ.

ಆದ್ರೆ ಅರಣ್ಯ ಇಲಾಖೆ ತಿರ್ಮಾನಕ್ಕೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಯಾಕಂದ್ರೆ  ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಿರುವುದು ಕೇವಲ ನಾಲ್ಕು ಆನೆಗಳಿ ಮಾತ್ರ. ಆದ್ರೆ ಕೊಡಗಿನಲ್ಲಿ ನೂರಾರು ಆನೆಗಳಿವೆ. ಹತ್ತಾರು ಗುಂಪುಗಳಿವೆ. ನಾಲ್ಕು ಆನೆಗಳಿಗೆ ಇದನ್ನು ಅಳವಡಿಸುವುದರಿಂದ ಎಲ್ಲಾ ಆನೆಗಳ ಚಲನವಲನ ಗುರುತಿಸಲಾಗುವುದಿಲ್ಲ. ಅದೂ ಅಲ್ಲದೆ, ರೇಡಿಯೋ ಕಾಲರ್ ಅಳವಡಿಕೆಯಿಂದ ಆನೆಗಳನ್ನು ಗುರುತಿಸಿ ಅವುಗಳನ್ನು ಅತ್ತಿಂದಿತ್ತ ಓಡಿಸಬಹುದಷ್ಟೆ. ಆದ್ರೆ ಕಾಡು ನಾಡು ಸಂಘರ್ಷ ತಪ್ಪಿಸಲಾಗುವುದಿಲ್ಲ ಎಂಬ ಅಭಿಪ್ರಾಯವಿದೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more