ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

Published : Jun 11, 2022, 08:29 AM ISTUpdated : Jun 11, 2022, 08:31 AM IST

- ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಹೈರಾಣಾಗಿರುವ ಜನ

- ಹಳೆಯ ಐಡಿಯಾವನ್ನ ಹೊಸದಾಗಿ ಜಾರಿಗೆ ತರಲು ಚಿಂತನೆ

- ಆನೆಗಳ ಚಲನವಲನ ಟ್ರ್ಯಾಕ್ ಮಾಡಲು ರೇಡಿಯೋ ಕಾಲರ್

ಕೊಡಗು ಜಿಲ್ಲೆಯ  ಜನರು ಕಾಡಾನೆಗಳ (Wild Elephant)  ಹಾವಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ ಅರ್ಥವಾಗದೆ ಅಸಹಾಯಕರಾಗಿ ಕುಳಿತಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ ಅರಣ್ಯ ಇಲಾಖೆ (Forest Department) ಹಳೆಯ ಒಂದು ಐಡಿಯಾವನ್ನೆ ಹೊಸದಾಗಿ ಜಾರಿಗೆ ತರಲು ಹೊರಟಿದೆ. ಅದೇನೆಂದ್ರೆ ಆನೆಗಳ ಚಲನವಲನ ಟ್ರ್ಯಾಕ್ ಮಾಡ್ಲಿಕ್ಕೆ ಅಂತ ರೇಡಿಯ ಕಾಲರ್  (Radio caller) ಅಳವಡಿಸುವುದು. ಆದ್ರೆ ಇದಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 300 ಕಾಡಾನೆಗಳಿವೆ. ಬಹುತೇಕ ಕಾಡಾನೆಗಳು ಕಾಫಿ ತೋಟ ಮತ್ತು ಗದ್ದೆಗಳನ್ನೆ ತಮ್ಮ ವಾಸಸ್ಥಾನವನ್ನಾಗಿಸಿಕೊಂಡಿವೆ. ಹಾಗಾಗಿ ಆನೆ ಪೀಡಿತ ಪ್ರದೇಶಗಳಲ್ಲಿ ಬೆಳೆಗಾರರಿಗೆ ಕಾಫಿ, ಬಾಳೆ, ಅಡಿಕೆ, ತೆಂಗು, ಭತ್ತ ಯಾವ ಬೆಳೆಯೂ ಕೈಗೆ ಸಿಗುತ್ತಿಲ್ಲ. ಎಷ್ಟೋ ಕಡೆಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಅದೂ ಅಲ್ಲದೆ ಆನೆಗಳ ಚಲನವಲನ ಅರಿಯಕಾಗದೆ ಎಷ್ಟೋ ಕಾರ್ಮಿಕರು, ಜನರು ಕೂಡ ಆನೆ ದಾಳಿಗೆ ಬಲಿಯಾಗಿದ್ದಾರೆ.

ಹಾಗಾಗಿ ಅರಣ್ಯ ಇಲಾಖೆ ಕೆಲವು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಮುಂದಾಗಿದೆ. ಪ್ರತಿಯೊಂದು ಆನೆಯ ಗುಂಪಿನಲ್ಲಿ ನಾಯಕ ಅಥವಾ ನಾಯಕಿ ಆನೆಯೊಂದಿರುತ್ತದೆ. ಅಂತಹ ಲೀಡರ್ ಆನೆಯನ್ನ ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಲಾಗಿದೆ. ಈ ರೀತಿ ಮಾಡುವುದರಿಂದ ಆನೆಗಳ ಚಲನವಲನ ಕಂಡು ಹಿಡಿಯುವುದು ಸಾರ್ವಜನಿಕರಿಗೆ ಮಾಹಿತಿ ನಿಡಲು ಅನುಕೂಲವಾಗುತ್ತದೆ.

ಆದ್ರೆ ಅರಣ್ಯ ಇಲಾಖೆ ತಿರ್ಮಾನಕ್ಕೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಯಾಕಂದ್ರೆ  ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಿರುವುದು ಕೇವಲ ನಾಲ್ಕು ಆನೆಗಳಿ ಮಾತ್ರ. ಆದ್ರೆ ಕೊಡಗಿನಲ್ಲಿ ನೂರಾರು ಆನೆಗಳಿವೆ. ಹತ್ತಾರು ಗುಂಪುಗಳಿವೆ. ನಾಲ್ಕು ಆನೆಗಳಿಗೆ ಇದನ್ನು ಅಳವಡಿಸುವುದರಿಂದ ಎಲ್ಲಾ ಆನೆಗಳ ಚಲನವಲನ ಗುರುತಿಸಲಾಗುವುದಿಲ್ಲ. ಅದೂ ಅಲ್ಲದೆ, ರೇಡಿಯೋ ಕಾಲರ್ ಅಳವಡಿಕೆಯಿಂದ ಆನೆಗಳನ್ನು ಗುರುತಿಸಿ ಅವುಗಳನ್ನು ಅತ್ತಿಂದಿತ್ತ ಓಡಿಸಬಹುದಷ್ಟೆ. ಆದ್ರೆ ಕಾಡು ನಾಡು ಸಂಘರ್ಷ ತಪ್ಪಿಸಲಾಗುವುದಿಲ್ಲ ಎಂಬ ಅಭಿಪ್ರಾಯವಿದೆ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more