ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

ಕೊಡಗು: ಕಾಡಾನೆ ಹಾವಳಿ ತಪ್ಪಿಸಲು ಆನೆಗಳಿಗೆ ರೇಡಿಯೋ ಕಾಲರ್

Published : Jun 11, 2022, 08:29 AM ISTUpdated : Jun 11, 2022, 08:31 AM IST

- ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಗೆ ಹೈರಾಣಾಗಿರುವ ಜನ

- ಹಳೆಯ ಐಡಿಯಾವನ್ನ ಹೊಸದಾಗಿ ಜಾರಿಗೆ ತರಲು ಚಿಂತನೆ

- ಆನೆಗಳ ಚಲನವಲನ ಟ್ರ್ಯಾಕ್ ಮಾಡಲು ರೇಡಿಯೋ ಕಾಲರ್

ಕೊಡಗು ಜಿಲ್ಲೆಯ  ಜನರು ಕಾಡಾನೆಗಳ (Wild Elephant)  ಹಾವಳಿಯಿಂದ ತಪ್ಪಿಸಿಕೊಳ್ಳುವುದು ಹೇಗೆ ಅರ್ಥವಾಗದೆ ಅಸಹಾಯಕರಾಗಿ ಕುಳಿತಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ ಅರಣ್ಯ ಇಲಾಖೆ (Forest Department) ಹಳೆಯ ಒಂದು ಐಡಿಯಾವನ್ನೆ ಹೊಸದಾಗಿ ಜಾರಿಗೆ ತರಲು ಹೊರಟಿದೆ. ಅದೇನೆಂದ್ರೆ ಆನೆಗಳ ಚಲನವಲನ ಟ್ರ್ಯಾಕ್ ಮಾಡ್ಲಿಕ್ಕೆ ಅಂತ ರೇಡಿಯ ಕಾಲರ್  (Radio caller) ಅಳವಡಿಸುವುದು. ಆದ್ರೆ ಇದಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಂದು ಅಂದಾಜಿನ ಪ್ರಕಾರ ಸುಮಾರು 300 ಕಾಡಾನೆಗಳಿವೆ. ಬಹುತೇಕ ಕಾಡಾನೆಗಳು ಕಾಫಿ ತೋಟ ಮತ್ತು ಗದ್ದೆಗಳನ್ನೆ ತಮ್ಮ ವಾಸಸ್ಥಾನವನ್ನಾಗಿಸಿಕೊಂಡಿವೆ. ಹಾಗಾಗಿ ಆನೆ ಪೀಡಿತ ಪ್ರದೇಶಗಳಲ್ಲಿ ಬೆಳೆಗಾರರಿಗೆ ಕಾಫಿ, ಬಾಳೆ, ಅಡಿಕೆ, ತೆಂಗು, ಭತ್ತ ಯಾವ ಬೆಳೆಯೂ ಕೈಗೆ ಸಿಗುತ್ತಿಲ್ಲ. ಎಷ್ಟೋ ಕಡೆಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಬಿಟ್ಟುಬಿಟ್ಟಿದ್ದಾರೆ. ಅದೂ ಅಲ್ಲದೆ ಆನೆಗಳ ಚಲನವಲನ ಅರಿಯಕಾಗದೆ ಎಷ್ಟೋ ಕಾರ್ಮಿಕರು, ಜನರು ಕೂಡ ಆನೆ ದಾಳಿಗೆ ಬಲಿಯಾಗಿದ್ದಾರೆ.

ಹಾಗಾಗಿ ಅರಣ್ಯ ಇಲಾಖೆ ಕೆಲವು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಮುಂದಾಗಿದೆ. ಪ್ರತಿಯೊಂದು ಆನೆಯ ಗುಂಪಿನಲ್ಲಿ ನಾಯಕ ಅಥವಾ ನಾಯಕಿ ಆನೆಯೊಂದಿರುತ್ತದೆ. ಅಂತಹ ಲೀಡರ್ ಆನೆಯನ್ನ ಗುರುತಿಸಿ ಅದಕ್ಕೆ ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಲಾಗಿದೆ. ಈ ರೀತಿ ಮಾಡುವುದರಿಂದ ಆನೆಗಳ ಚಲನವಲನ ಕಂಡು ಹಿಡಿಯುವುದು ಸಾರ್ವಜನಿಕರಿಗೆ ಮಾಹಿತಿ ನಿಡಲು ಅನುಕೂಲವಾಗುತ್ತದೆ.

ಆದ್ರೆ ಅರಣ್ಯ ಇಲಾಖೆ ತಿರ್ಮಾನಕ್ಕೆ ಮಿಶ್ರ ಅಭಿಪ್ರಾಯ ವ್ಯಕ್ತವಾಗಿದೆ. ಯಾಕಂದ್ರೆ  ರೇಡಿಯೋ ಕಾಲರ್ ಅಳವಡಿಸಲು ನಿರ್ಧರಿಸಿರುವುದು ಕೇವಲ ನಾಲ್ಕು ಆನೆಗಳಿ ಮಾತ್ರ. ಆದ್ರೆ ಕೊಡಗಿನಲ್ಲಿ ನೂರಾರು ಆನೆಗಳಿವೆ. ಹತ್ತಾರು ಗುಂಪುಗಳಿವೆ. ನಾಲ್ಕು ಆನೆಗಳಿಗೆ ಇದನ್ನು ಅಳವಡಿಸುವುದರಿಂದ ಎಲ್ಲಾ ಆನೆಗಳ ಚಲನವಲನ ಗುರುತಿಸಲಾಗುವುದಿಲ್ಲ. ಅದೂ ಅಲ್ಲದೆ, ರೇಡಿಯೋ ಕಾಲರ್ ಅಳವಡಿಕೆಯಿಂದ ಆನೆಗಳನ್ನು ಗುರುತಿಸಿ ಅವುಗಳನ್ನು ಅತ್ತಿಂದಿತ್ತ ಓಡಿಸಬಹುದಷ್ಟೆ. ಆದ್ರೆ ಕಾಡು ನಾಡು ಸಂಘರ್ಷ ತಪ್ಪಿಸಲಾಗುವುದಿಲ್ಲ ಎಂಬ ಅಭಿಪ್ರಾಯವಿದೆ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more