ಅಧಿಕಾರಿಗಳ ನಿರ್ಲಕ್ಷ್ಯ..ಅರ್ಧಕ್ಕೆ ನಿಂತ ಮನೆ ಕಾಮಗಾರಿ: ಗುಡಿಸಲುಗಳಲ್ಲೇ ದಿನದೂಡುತ್ತಿರುವ ಆದಿವಾಸಿ ಕುಟುಂಬ

ಅಧಿಕಾರಿಗಳ ನಿರ್ಲಕ್ಷ್ಯ..ಅರ್ಧಕ್ಕೆ ನಿಂತ ಮನೆ ಕಾಮಗಾರಿ: ಗುಡಿಸಲುಗಳಲ್ಲೇ ದಿನದೂಡುತ್ತಿರುವ ಆದಿವಾಸಿ ಕುಟುಂಬ

Published : Nov 20, 2023, 10:20 AM IST

ಇಂದಿಗೂ ಗುಡಿಸಲು, ಶೆಡ್‌ಗಳಲ್ಲಿ ಬದುಕುವ ಬುಡಕಟ್ಟು ಆದಿವಾಸಿಗಳ ಜನರಿಗೆ ವಸತಿ ಕಲ್ಪಿಸುವುದಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಆದ್ರೆ ಅವುಗಳನ್ನು ಕಟ್ಟುನಿಟ್ಟಾಗಿ ಕಾರ್ಯಗತಗೊಳಿಸಬೇಕಾಗಿರುವ ಅಧಿಕಾರಿಗಳ ಯಡವಟ್ಟಿನಿಂದಾಗಿ ಆದಿವಾಸಿಗಳು ಶೆಡ್ಡಿಯನಲ್ಲಿಯೇ ಬದುಕುತ್ತಿದ್ದಾರೆ.
 

ಅರ್ಧಕ್ಕೆ ನಿಂತಿರುವ ಮನೆಗಳ(Houses) ಕಾಮಗಾರಿ.. ಫ್ಲೋರಿಂಗೂ ಇಲ್ಲ. ಕಿಟಕಿ, ಬಾಗಿಲುಗಳೂ ಇಲ್ಲ. ಇದು ಕೊಡಗು(Kodagu) ಜಿಲ್ಲೆ ಕುಶಾಲನಗರ ತಾಲ್ಲೂಕಿನ ಬೆಂಡೆಬೆಟ್ಟ ಗಿರಿಜನ ಹಾಡಿಯಲ್ಲಿನ ಆದಿವಾಸಿ ಬುಡಕಟ್ಟು(Adivasi tribe) ಜನರ ಪರಿಸ್ಥಿತಿ. ಹೌದು ಬುಡಕಟ್ಟು ಆದಿವಾಸಿ ಕುಟುಂಬಗಳ ಅಭಿವೃದ್ಧಿಗಾಗಿ ಸರ್ಕಾರವೇನೋ(Government) ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಆದ್ರೆ ಅವುಗಳನ್ನು ಕಾರ್ಯಗತಗೊಳಿಸಬೇಕಾಗಿರುವ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮನೆಗಳ ಬಿಲ್ಲು ಯಾವುದೋ ಗುತ್ತಿಗೆದಾರನ ಪಾಲಾಗಿದೆ. ಬೆಂಡೆಬೆಟ್ಟ ಹಾಡಿಯಲ್ಲಿ 50 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು ಮೂರು ವರ್ಷಗಳ ಹಿಂದೆ ಮನೆಗಳನ್ನು ನಿರ್ಮಿಸಿಕೊಳ್ಳಲು 18 ಕುಟುಂಬಗಳಿಗೆ ಹಣ ಮಂಜೂರು ಮಾಡಲಾಗಿತ್ತು. ಈ ವೇಳೆ ಚಂದ್ರ ಎಂಬಾತ ಮನೆ ನಿರ್ಮಿಸಿ ಕೊಡುವುದಾಗಿ ಕಾಮಗಾರಿ ಗುತ್ತಿಗೆ ಪಡೆದಿದ್ರು. ಆದ್ರೆ 18 ಮನೆಗಳಿಗೆ ಅಡಿಪಾಯ ಹಾಕಿ ಗೋಡೆ ಕಟ್ಟಿ ಛಾವಣಿ ಹೊದಿಸಿ  ಬಿಲ್ ಪಡೆದಿದ್ದಾನೆ.. ಮೊದಲ ಎರಡು ಬಿಲ್ ಪಡೆದ ಗುತ್ತಿಗೆದಾರ ಮನೆಗಳಿಗೆ ಫ್ಲೋರಿಂಗೂ ಇಲ್ಲ. ಕಿಟಕಿ, ಬಾಗಿಲುಗಳನ್ನೂ ಹಾಕಿಸಿಲ್ಲ.

ಮೊದಲ ಎರಡು ಬಿಲ್ ಪಡೆದ ಗುತ್ತಿಗೆದಾರ ಉಳಿದ ಕೆಲಸ ಮಾಡಿಸಿಲ್ಲ.. ಹೀಗಾಗಿ ಹಳೆಯ ಗುಡಿಸಲುಗಳಲ್ಲೇ ಆದಿವಾಸಿ ಕುಟುಂಬಗಳು ದಿನದೂಡುತ್ತಿವೆ. ಸಾರಣೆ ಮಾಡಿಸಿದ್ರೆ ಮಾತ್ರವೇ ಮೂರನೇ ಬಿಲ್ ಬಿಡುಗಡೆಯಾಗುತ್ತೆ.. ಆದ್ರೆ ಅದನ್ನ ಗುತ್ತಿಗೆದಾರ ಮಾಡಿಸುತ್ತಿಲ್ಲ... ಮತ್ತೊಂದೆಡೆ ಗ್ರಾಮದಲ್ಲಿ ವಿದ್ಯುತ್ ಲೈನ್ ಇದೆಯಾದ್ರೂ ಹಾಡಿಯ ಮನೆಗಳಿಗೆ ಮಾತ್ರ ಕರೆಂಟ್ ಭಾಗ್ಯವಿಲ್ಲ. ಶಾಲಾ ಕಾಲೇಜುಗಳಿಗೆ ಹೋಗುತ್ತಿರುವ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಅವರೆಲ್ಲರೂ ಅನಿವಾರ್ಯವಾಗಿ ದೀಪದ ಬೆಳಕಿನಲ್ಲಿ ಓದಿಕೊಳ್ಳಬೇಕಾದ ಪರಿಸ್ಥಿತಿ ಇದೆ.  ಇನ್ನು ಸೀಮೆ ಎಣ್ಣೆಯನ್ನೂ ಕೊಡುತ್ತಿಲ್ಲ.. ಹೀಗಾಗಿ ಕತ್ತಲಾಗುವಷ್ಟರಲ್ಲಿ ಊಟ ಮಾಡಿ ಮಲಗುವ ಅನಿವಾರ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಚಾಮರಾಜನಗರ ಕಾರಾಗೃಹದಲ್ಲಿ ಖೈದಿಗಳಿಗೆ ಕಂಪ್ಯೂಟರ್ ತರಬೇತಿ: SSLC, ಮೇಲ್ಪಟ್ಟ ವಿದ್ಯಾರ್ಹತೆಯುಳ್ಳವರು ಆಯ್ಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more